ಬ್ರೇಕಿಂಗ್ ನ್ಯೂಸ್
03-01-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜ.3: ಹೊಸ ವರ್ಷಾಚರಣೆಯ ನೆಪದಲ್ಲಿ ಬಿಜೆಪಿ ಎಂಎಲ್ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್ಗಳನ್ನು ಕಳುಹಿಸಿಕೊಟ್ಟಿದ್ದು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದ್ದಾರೆ.
ಸಿಹಿತಿಂಡಿಗಳ ಬಾಕ್ಸ್ ಅನ್ನು ಸರ್ಜಿ ಹೆಸರಿನಲ್ಲಿ ಮೂವರಿಗೆ ಪೋಸ್ಟ್ ಮಾಡಲಾಗಿದ್ದು ಈ ಪೈಕಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್.ಎನ್ ನಾಗರಾಜ್ ಸಹ ಒಬ್ಬರು. ದೂರಿನ ಪ್ರಕಾರ, ಜನವರಿ 1 ರಂದು ಅನಾಮಧೇಯ ವ್ಯಕ್ತಿಗಳು ಡಾ. ಸರ್ಜಿ ಅವರ ಹೆಸರನ್ನು ಬಳಸಿಕೊಂಡು, DTDC ಕೊರಿಯರ್ ಮೂಲಕ ಹೊಸ ವರ್ಷದ ಶುಭಾಶಯ ಪತ್ರದ ಜೊತೆಗೆ ಸಿಹಿತಿಂಡಿಗಳ ಬಾಕ್ಸ್ ಕಳುಹಿಸಿದ್ದಾರೆ. ಬಾಕ್ಸ್ ಸ್ವೀಕರಿಸಿದ ನಾಗರಾಜ್ ಅವರು ಕೆಲವು ಸಿಹಿತಿಂಡಿಗಳನ್ನು ಸೇವಿಸಿದ್ದಾರೆ ಮತ್ತು ಸಿಹಿ ತಿಂಡಿಗಳು ತೀವ್ರ ಕಹಿಯಾಗಿರುವುದನ್ನು ಗಮನಿಸಿದ್ದಾರೆ.
ಕೂಡಲೇ ನಾಗರಾಜ್ ಅವರು ಡಾ. ಸರ್ಜಿ ಅವರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ಡಾಕ್ಟರ್ ಸರ್ಜಿ ಅವರು ತಾನು ಯಾವುದೇ ಸಿಹಿತಿಂಡಿಗಳನ್ನು ಕಳುಹಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಇದು ಅವರ ಹೆಸರಿನಲ್ಲಿ ಕಳುಹಿಸಲಾದ ಸಿಹಿತಿಂಡಿಯಾಗಿದ್ದು, ವಿಷ ಪದಾರ್ಥ ಕಲಬೆರಕೆ ಮಾಡಿರಬಹುದು ಎಂಬ ಅನುಮಾನ ಹುಟ್ಟುಹಾಕಿದೆ.
ಸಿಹಿತಿಂಡಿ ಮತ್ತು ಅನಾಮಧೇಯ ಪತ್ರ ಕಳುಹಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 123 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆಗಾಗಿ ಪೊಲೀಸರು ಸಿಹಿತಿಂಡಿಗಳ ಬಾಕ್ಸ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಇದೇ ರೀತಿಯ ಸಿಹಿತಿಂಡಿಯ ಪೆಟ್ಟಿಗೆಗಳನ್ನು ಅರವಿಂದ್ ಮತ್ತು ಪವಿತ್ರಾ ಎಂಬ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ. ಭದ್ರಾವತಿಯಿಂದ ಕೊರಿಯರ್ ಮಾಡಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
BJP MLC Dhananjaya Sarji has alleged that unknown people sent suspicious boxes in his name to several people in Shivamogga, in the guise of extending New Year wishes. His office has filed a complaint with the Shivamogga police in this regard.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm