ಬ್ರೇಕಿಂಗ್ ನ್ಯೂಸ್
15-12-20 01:16 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.15: ವಿಧಾನ ಪರಿಷತ್ ಕಲಾಪದಲ್ಲಿ ಪ್ರಜಾ ಪ್ರತಿನಿಧಿಗಳು ತಲೆತಗ್ಗಿಸುವ ರೀತಿ ಬಿಜೆಪಿ- ಕಾಂಗ್ರೆಸ್ ಸದಸ್ಯರು ನಡೆದುಕೊಂಡಿದ್ದಾರೆ. ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಕೆಳಗಿಳಿಸಲು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದ ಬಿಜೆಪಿ ಸದಸ್ಯರು ಹೈಡ್ರಾಮಾ ನಡೆಸಿದ್ದಾರೆ. ಈ ನಡುವೆ, ಕಲಾಪ ಆರಂಭಕ್ಕೂ ಮುನ್ನ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದ ಉಪ ಸಭಾಪತಿ ಜೆಡಿಎಸ್ ನ ಧರ್ಮೇಗೌಡರನ್ನು ಕಾಂಗ್ರೆಸ್ ಸದಸ್ಯರು ಪೀಠಿದಿಂದ ಎಳೆದಾಡಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿಧಾನ ಪರಿಷತ್ತಿನ ಮಂಡಿಸುವ ಸಲುವಾಗಿ ಒಂದು ದಿನದ ಕಲಾಪವನ್ನು ನಿಗದಿಪಡಿಸಲಾಗಿತ್ತು. ಆದರೆ, ಬಿಜೆಪಿ ಸದಸ್ಯರು ಸಭಾಪತಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದರಿಂದ ಈ ವಿಚಾರ ಹೈಡ್ರಾಮಾಕ್ಕೆ ಕಾರಣವಾಯಿತು. ಕಲಾಪಕ್ಕೆ ಸಭಾಪತಿಯವರು ಆಗಮಿಸುವ ಮೊದಲೇ ಉಪ ಸಭಾಪತಿಯವರನ್ನು ಕೂರಿಸಿ, ಬಿಜೆಪಿ ಕಲಾಪ ಆರಂಭಿಸಲು ಪ್ಲಾನ್ ಹಾಕಿತ್ತು. ಅಲ್ಲದೆ, ಸಭಾಪತಿ ಕಲಾಪಕ್ಕೆ ಆಗಮಿಸುವ ಬಾಗಿಲನ್ನು ಮುಚ್ಚಿ ಪ್ರತಾಪಚಂದ್ರ ಶೆಟ್ಟಿಗೆ ತಡೆ ಹಾಕಿದ್ದರು. ಇದರಿಂದ ಕೆರಳಿದ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ಗದ್ದಲ ಎಬ್ಬಿಸಿದ್ದಾರೆ. ಸಭಾಪತಿ ಸ್ಥಾನದಲ್ಲಿ ಕುಳಿತಿದ್ದ ಉಪ ಸಭಾಪತಿ ಅವರನ್ನು ಬಲವಂತವಾಗಿ ಎಳೆದಾಡಿದ್ದಾರೆ. ಸಭಾಪತಿ ಪೀಠದಿಂದಲೇ ಬಲ ಪ್ರಯೋಗಿಸಿ ಎಬ್ಬಿಸಿದ್ದಲ್ಲದೆ, ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಎಳೆದಾಡಿದ್ದಾರೆ.


ಇಷ್ಟಾಗುತ್ತಿದ್ದಂತೆ ಮಾರ್ಶಲ್ ಗಳು ಆಗಮಿಸಿದ್ದು, ಅವರ ಮೇಲೂ ಕಾಂಗ್ರೆಸ್ ಸದಸ್ಯರು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ, ಜೆಡಿಎಸ್ ಸದಸ್ಯರು ವಿಧಾನ ಪರಿಷತ್ ಕಲಾಪ ಅನ್ನುವುದನ್ನೇ ಮರೆತು ಬೀದಿ ರೌಡಿಗಳ ರೀತಿ ಪರಸ್ಪರ ತಳ್ಳಾಟ, ಹಲ್ಲೆ ನಡೆಸಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಸದಸ್ಯರು ಸಭಾಪತಿ ಆಗಮಿಸುವ ಬಾಗಿಲನ್ನು ಒಡೆದು ಹಾಕಿದ್ದಾರೆ. ಬಿಜೆಪಿ ಸದಸ್ಯರ ತಡೆಯನ್ನು ಭೇದಿಸಿ, ಸಭಾಪತಿ ಪ್ರತಾಪಚಂದ್ರ ಶೆಟ್ಟಿಯವರನ್ನು ಒಳಗೆ ಕರೆಸಿಕೊಂಡಿದ್ದಾರೆ. ಸದನದಲ್ಲಿ ಗಲಾಟೆ, ಗದ್ದಲ ನಡೆಯುತ್ತಿದ್ದಂತೆಯೇ ಒಳಗೆ ಬಂದ ಸಭಾಪತಿ, ನೇರವಾಗಿ ಕಲಾಪವನ್ನು ಮತ್ತೆ ಅನಿರ್ದಿಷ್ಟ ಅವಧಿಗೆ ಮುಂದೂಡಿದ್ದಾರೆ.

ಕಳೆದ ಗುರುವಾರ ಇದೇ ರೀತಿ, ಸಭಾಪತಿ ಕಲಾಪವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆಬಳಿಕ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಅವಿಶ್ವಾಸ ಗೊತ್ತುವಳಿ ಚರ್ಚೆ ಆಗಬೇಕೆಂದು ಬಿಜೆಪಿ ಪಟ್ಟು ಹಿಡಿದು ಒಂದು ದಿನದ ಕಲಾಪ ನಡೆಸಲು ರಾಜ್ಯಪಾಲರಿಗೆ ಒತ್ತಡ ಹೇರಿದ್ದರು. ಅದರಂತೆ, ಒಂದು ದಿನದ ಕಲಾಪ ಕರೆಯಲಾಗಿತ್ತು. ಆದರೆ, ಬಿಜೆಪಿ ಸದಸ್ಯರು ಸಭಾಪತಿಯವರನ್ನೇ ಬದಲಾಯಿಸಲು ತಯಾರಿ ಮಾಡಿಕೊಂಡಿದ್ದರು. ಇಂದು ಸದನ ಆರಂಭಗೊಳ್ಳುವ ಮೊದಲೇ ಉಪ ಸಭಾಪತಿ ಜೆಡಿಎಸ್ ಪಕ್ಷದ ಧರ್ಮೇಗೌಡರನ್ನು ಪೀಠದಲ್ಲಿ ಕುಳ್ಳಿರಿಸಿದ್ದರು. ಅಲ್ಲದೆ, ಬಿಜೆಪಿ ಸದಸ್ಯರು ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಿದ್ದರಿಂದ ಕೆರಳಿದ ಕಾಂಗ್ರೆಸ್ ಸದಸ್ಯರು ಗದ್ದಲ ಎಬ್ಬಿಸಿದ್ದಲ್ಲದೆ ಸಭಾಪತಿ ಪೀಠದಲ್ಲಿದ್ದ ಧರ್ಮೇಗೌಡರನ್ನು ಪೀಠದಿಂದ ಎಳೆದಾಡಿದ್ದಾರೆ.

ಸಭಾಪತಿ ಪೀಠದಲ್ಲಿ ಕೂರುವಂತಿಲ್ಲ
ಸಭಾಪತಿ ವಿರುದ್ಧ ಅವಿಶ್ವಾಸ ಗೊತ್ತುವಳಿ ನೋಟೀಸನ್ನು 15 ದಿನಗಳ ಮೊದಲೇ ನೀಡಿದ್ದೆವು. ಹಾಗಿರುವಾಗ, ಸಭಾಪತಿ ಪೀಠದಲ್ಲಿ ಪ್ರತಾಪಚಂದ್ರ ಶೆಟ್ಟಿ ಕೂರುವಂತಿಲ್ಲ. ಇಂದು ವಿಶೇಷ ಕಲಾಪ ಕರೆದಿದ್ದು, ಇದನ್ನು ಉಪ ಸಭಾಪತಿಯವರೇ ನಡೆಸಬೇಕು. ಸಭಾಪತಿಗೆ ವಿಶ್ವಾಸ ಇದ್ದರೆ, ಸದನಕ್ಕೆ ಬಂದು ವಿಶ್ವಾಸ ಸಾಬೀತುಪಡಿಸಬೇಕಿತ್ತು. ಕಾಂಗ್ರೆಸ್ ಸದಸ್ಯರು ಗದ್ದಲ, ಕಿತ್ತಾಟ ನಡೆಸಿದ್ದು ಎಷ್ಟು ಸರಿ ಎಂದು ವಿಧಾನ ಪರಿಷತ್ ಸದಸ್ಯೆ ಬಿಜೆಪಿಯ ತೇಜಸ್ವಿನಿ ಗೌಡ ಹೇಳಿದ್ದಾರೆ.
ರಾಜ್ಯಪಾಲರಿಗೆ ದೂರು
ಸದನದಲ್ಲಿ ಹೈಡ್ರಾಮಾ ನಡೆದಿದ್ದು ಮತ್ತು ಸಭಾಪತಿ ನಡುವೆ ಬಂದು ಕಲಾಪವನ್ನು ಮತ್ತೆ ಮುಂದೂಡಿದ್ದು ಕಾನೂನು ಬಿಕ್ಕಟ್ಟು ಎದುರಾಗಿದ್ದರಿಂದ ಇವೆಲ್ಲ ವಿಚಾರದ ಬಗ್ಗೆ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಲು ನಿರ್ಧರಿಸಿದೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm