ಬ್ರೇಕಿಂಗ್ ನ್ಯೂಸ್
05-01-25 07:36 pm HK News Desk ಕರ್ನಾಟಕ
ಮೈಸೂರು, ಜ.5: ಕಾಂಗ್ರೆಸ್ ಅವಧಿಯಲ್ಲಿ ಲಂಚ ಶೇ.60 ತಲುಪಿದೆ. ಇದನ್ನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ. ವಿಧಾನಸೌಧ ಒಳಗಡೆಯೇ ಸಚಿವರು ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮನೆ ಹಂಚಿಕೆಯಲ್ಲೂ ಲಂಚ ಪಡೆಯಲಾಗುತ್ತಿದೆ. ಮೊದಲು ಪಿಡಿಒ ಲಂಚ ಪಡೆಯುತ್ತಿದ್ದ, ಈಗ ವಿಧಾನಸೌಧಲ್ಲಿ ಸಚಿವರೇ ಲಂಚ ಪಡೆಯುತ್ತಿದ್ದಾರೆ. ಸತ್ಯಮೇವಾ ಜಯತೇ ಎಂಬಂತೆ ಸಿದ್ದರಾಮಯ್ಯ ನಡೆದುಕೊಳ್ಳುತ್ತಿದ್ದಾರಾ? ಅವರ ಆತ್ಮಕ್ಕೆ ಅವರು ಉತ್ತರ ಕೊಟ್ಟುಕೊಳ್ಳಲಿ. ಹಣ ಲೂಟಿ ಮಾಡುವುದಕ್ಕೆ ಇತಿಮಿತಿ ಇಲ್ವಾ? ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಇದನ್ನ ನೋಡಿದ್ರೆ ಹಿಂದಿನ ಬಿಜೆಪಿ ಸರ್ಕಾರವೇ ಚೆನ್ನಾಗಿತ್ತು ಎನ್ನುತ್ತಿದ್ದಾರೆ ಕಾಂಗ್ರೆಸ್ ಪರ ಗುತ್ತಿಗೆದಾರರು. ಇದಕ್ಕೆಲ್ಲಾ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ಬೆಲೆ ತರಬೇಕಾಗುತ್ತದೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ ಕೆ ಭವಿಷ್ಯ ನುಡಿದರು.
ಬಸ್ ದರ ಶೇ 15 ರಷ್ಟು ಏರಿಕೆ ವಿಚಾರದ ಪ್ರಶ್ನೆಗೆ, ಸರ್ಕಾರ ಗ್ಯಾರೆಂಟಿಯನ್ನ ನಿಲ್ಲಿಸಲು ಕಾರಣವನ್ನ ಹುಡುಕುತ್ತಿದೆ. ಹೇಗಾದರು ಮಾಡಿ ಗ್ಯಾರೆಂಟಿ ನಿಲ್ಲಿಸಲು ನೆಪ ಹುಡುಕುತ್ತಿದ್ದಾರೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ನಿಲ್ಲಿಸಬೇಡಿ. ಸಾಕಷ್ಟು ಜನರಿಗೆ ಇದರಿಂದ ಅನುಕೂಲ ಆಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಅವರಿಂದಲೇ ಕಿತ್ತು ಅವರಿಗೆ ಕೊಡುವ ಕೆಲಸವನ್ನ ಸರ್ಕಾರ ಮಾಡಬಾರದು. ಮಧ್ಯಮ ವರ್ಗದ ಜನರ ಬದುಕಿನ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ. ಅತ್ತೆಯದನ್ನ ಅಳಿಯ ದಾನ ಮಾಡಿದ ಅನ್ನೋ ಮಾತಿನಂತೆ ಅವರಿಂದ ಕಿತ್ತು ಇವರಿಗೆ ಕೊಡೋಕೆ ಇವರೇ ಆಗಬೇಕಾ.. ಎಂದು ಸಾರಿಗೆ ದರ ಏರಿಕೆ ಬಗ್ಗೆ ಕುಮಾರಸ್ವಾಮಿ ಕುಹಕವಾಡಿದ್ದಾರೆ.
ಜನಸಾಮಾನ್ಯರಿಗೆ ಇದು ಹೊರಯಾಗಲಿದೆ. ಯಾವುದೇ ಮಂತ್ರಿ ಮಕ್ಕಳು, ಶಾಸಕರ ಮಕ್ಕಳು ಬಸ್ ನಲ್ಲಿ ಓಡಾಡುವುದಿಲ್ಲ. ಓಡಾಡುವವರೆಲ್ಲಾ ಜನಸಾಮಾನ್ಯರು. ದಿನಕ್ಕೆ 10 ರೂಪಾಯಿ ಹೆಚ್ಚಿಗೆಯಾದ್ರು ಅದು ಅವರಿಗೆ ಹೊರೆಯಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕೆ ಹೇಳಿದರು.
Bribery has reached 60% during the Congress term. This has been admitted by Congress party workers. Union Minister H.D. Kumaraswamy has dropped a new bombshell, saying that ministers are taking bribes inside the Vidhan Soudha itself.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm