ಬ್ರೇಕಿಂಗ್ ನ್ಯೂಸ್
06-01-25 01:01 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಹಾಸ್ಟೆಲ್ ಕಟ್ಟಡದ 3ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಸ್ನಾತಕೋತ್ತರ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಮೃತನನ್ನು ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ಗುಜರಾತ್ ಮೂಲದ ನಿಲಯ್ ಕೈಲಾಶ್ಭಾಯ್ ಪಟೇಲ್ (28) ಎಂದು ಗುರುತಿಸಲಾಗಿದೆ.
ಶನಿವಾರ ನಿಲಯ್ ತನ್ನ ಹುಟ್ಟುಹಬ್ಬವಿದ್ದ ಕಾರಣ ಸ್ನೇಹಿತರೊಂದಿಗೆ ಹೊರಗಡೆ ತೆರಳಿದ್ದ. ನಂತರ ಹಾಸ್ಟೆಲ್ನಲ್ಲಿರುವ ಸ್ನೇಹಿತನ ಕೊಠಡಿಯಲ್ಲಿ ನಿಲಯ್ ಹುಟ್ಟುಹಬ್ಬ ಆಚರಿಸಲಾಗಿತ್ತು. ಬಳಿಕ ತನ್ನ ಕೋಣೆಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಭಾನುವಾರ ಬೆಳಗ್ಗೆ ಹಾಸ್ಟೆಲ್ ಭದ್ರತಾ ಸಿಬ್ಬಂದಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಯಾಂಪಸ್ ಆವರಣದ ಹಾಸ್ಟೆಲ್ನ ಬೇರೆ ಬ್ಲಾಕ್ನಲ್ಲಿರುವ ಸ್ನೇಹಿತರ ಕೋಣೆಯಲ್ಲಿ ಹುಟ್ಟುಹಬ್ಬ ಆಚರಿಸಲು ನಿಲಯ್ ತೆರಳಿದ್ದ. ರಾತ್ರಿ 11.30ರ ಸುಮಾರಿಗೆ ಸ್ನೇಹಿತನ ಕೊಠಡಿಯಿಂದ ಹೊರಟು 'F' ಬ್ಲಾಕ್ನಲ್ಲಿರುವ ತನ್ನ ಕೋಣೆಗೆ ವಾಪಸಾಗುವಾಗ ಘಟನೆ ಸಂಭವಿಸಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ಹಾಸ್ಟೆಲ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ನಿಲಯ್ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ನಿಲಯ್ ಸಾವಿನ ಕುರಿತು ಸ್ಪಷ್ಟನೆ ನೀಡುವಂತೆ ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ಗೆ ಒತ್ತಾಯಿಸಿದೆ.
Bangalore IIM indian management 28 year old student dies after falling from 3rd floor of college hostel. The deceased has been identified as Kailesh Patil.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm