ಬ್ರೇಕಿಂಗ್ ನ್ಯೂಸ್
06-01-25 01:04 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಇಬ್ಬರು ಶಿಶುಗಳಲ್ಲಿ ಚೀನಾದಲ್ಲಿ ಪತ್ತೆಯಾದ ಎಚ್ಎಂಪಿವಿ (HMPV) ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಮೊದಲ ಪ್ರಕರಣದಲ್ಲಿ 8 ತಿಂಗಳ ಮಗುವಿಗೆ ಜ್ವರ ಬಂದ ಕಾರಣ ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಮಾಹಿತಿ ನೀಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲಿಯೂ ಇದೇ ವೈರಸ್ ದೃಢಪಟ್ಟಿದೆ. ಆದರೆ, ಶಿಶು ಆರೋಗ್ಯದಲ್ಲಿದ್ದು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಎಚ್ಎಂಪಿವಿ ವೈರಸ್ ದೇಶದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಆದರೆ, ಚೀನಾದ್ದೆಯಾ ಅಥವಾ ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ. 0.78 ರಷ್ಟು ಪ್ರಮಾಣದಲ್ಲಿ ಕಾಣಿಸುತ್ತದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ತಿಳಿಸಿದ್ದಾರೆ.
ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಪರಿಶೀಲನೆ ನಡೆಸುತ್ತಿದೆ. ವೈರಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹರ್ಷಗುಪ್ತ ತಿಳಿಸಿದ್ದಾರೆ. ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾ ನ್ಯೂಮೋ ವೈರಸ್ ಅಥವಾ ಎಚ್ಎಂಪಿವಿ ಹೊಸದೇನಲ್ಲ. ಇದನ್ನು ಮೊದಲು 2001 ರಲ್ಲಿ ಪತ್ತೆ ಮಾಡಲಾಗಿತ್ತು. ಆದಾಗ್ಯೂ, ಕೆಲವು ಸೆರೋಲಾಜಿಕ್ ಪುರಾವೆಗಳು ಈ ವೈರಸ್ 1958 ರಿಂದಲೇ ವ್ಯಾಪಕವಾಗಿ ಹರಡಿತ್ತು ಎಂದು ಕೆಲವು ತಜ್ಞರು ಹೇಳಿದ್ದಾರೆ.
The Indian Council of Medical Research (ICMR) has confirmed two cases of Human Metapneumovirus (HMPV) in Karnataka through routine surveillance for respiratory viral pathogens, the Union Health Ministry said on Monday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm