ಬ್ರೇಕಿಂಗ್ ನ್ಯೂಸ್
06-01-25 01:04 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಇಬ್ಬರು ಶಿಶುಗಳಲ್ಲಿ ಚೀನಾದಲ್ಲಿ ಪತ್ತೆಯಾದ ಎಚ್ಎಂಪಿವಿ (HMPV) ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಮೊದಲ ಪ್ರಕರಣದಲ್ಲಿ 8 ತಿಂಗಳ ಮಗುವಿಗೆ ಜ್ವರ ಬಂದ ಕಾರಣ ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಮಾಹಿತಿ ನೀಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲಿಯೂ ಇದೇ ವೈರಸ್ ದೃಢಪಟ್ಟಿದೆ. ಆದರೆ, ಶಿಶು ಆರೋಗ್ಯದಲ್ಲಿದ್ದು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಎಚ್ಎಂಪಿವಿ ವೈರಸ್ ದೇಶದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಆದರೆ, ಚೀನಾದ್ದೆಯಾ ಅಥವಾ ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ. 0.78 ರಷ್ಟು ಪ್ರಮಾಣದಲ್ಲಿ ಕಾಣಿಸುತ್ತದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ತಿಳಿಸಿದ್ದಾರೆ.
ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಪರಿಶೀಲನೆ ನಡೆಸುತ್ತಿದೆ. ವೈರಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹರ್ಷಗುಪ್ತ ತಿಳಿಸಿದ್ದಾರೆ. ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾ ನ್ಯೂಮೋ ವೈರಸ್ ಅಥವಾ ಎಚ್ಎಂಪಿವಿ ಹೊಸದೇನಲ್ಲ. ಇದನ್ನು ಮೊದಲು 2001 ರಲ್ಲಿ ಪತ್ತೆ ಮಾಡಲಾಗಿತ್ತು. ಆದಾಗ್ಯೂ, ಕೆಲವು ಸೆರೋಲಾಜಿಕ್ ಪುರಾವೆಗಳು ಈ ವೈರಸ್ 1958 ರಿಂದಲೇ ವ್ಯಾಪಕವಾಗಿ ಹರಡಿತ್ತು ಎಂದು ಕೆಲವು ತಜ್ಞರು ಹೇಳಿದ್ದಾರೆ.
The Indian Council of Medical Research (ICMR) has confirmed two cases of Human Metapneumovirus (HMPV) in Karnataka through routine surveillance for respiratory viral pathogens, the Union Health Ministry said on Monday.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am