ಬ್ರೇಕಿಂಗ್ ನ್ಯೂಸ್
06-01-25 02:03 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಇಬ್ಬರು ಮಕ್ಕಳನ್ನು ಕೊಂದು ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆರ್ಎಂವಿ 2ನೇ ಹಂತದಲ್ಲಿರುವ ಮನೆಯೊಂದರಲ್ಲಿ ನಡೆದಿದೆ.
ಮೃತರನ್ನು ಅನೂಪ್ (38), ಅವರ ಪತ್ನಿ ರಾಖಿ (35), ಮತ್ತು ಐದು ಹಾಗೂ 2 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸದಾಶಿವನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಮಕ್ಕಳಿಬ್ಬರಿಗೂ ವಿಷಪ್ರಾಶನ ಮಾಡಿದ ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಅಲಹಾಬಾದ್ ಮೂಲದ ಅನೂಪ್, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಕನ್ಸಲ್ಟೆಂಟ್ ಆಗಿ ಅನೂಪ್ ಕೆಲಸ ಮಾಡುತ್ತಿದ್ದರು.
ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಅನೂಪ್ ಮನೆಯಲ್ಲಿ ಮೂರು ಜನ ಮನೆ ಕೆಲಸ ಮಾಡುತ್ತಿದ್ದರು. ಮೊದಲ ಮಗುವಿಗೆ ಮಾನಸಿಕ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು.
ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗ್ಬೇಕು ಬೇಗ ಮನೆಗೆ ಬನ್ನಿ ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರು. ಹೀಗಾಗಿ ಇಂದು ಬೆಳಗ್ಗೆ ಕೆಲಸದವರು ಮನೆಗೆ ಬಂದಿದ್ದಾರೆ. ಭಾನುವಾರ ಸಹ ಪ್ಯಾಕಿಂಗ್ ಮಾಡಲು ಕೆಲಸದವರನ್ನ ಕರೆಸಿಕೊಂಡಿದ್ದರು.
ಮೂವರು ಕೆಲಸಗಾರರ ಪೈಕಿ ಇಬ್ಬರು ಅಡುಗೆ ಕೆಲಸ ಮಾಡುತಿದ್ರು, ಇನ್ನೊಬರು ಮಗು ನೋಡಿಕೊಳ್ಳುತ್ತಿದ್ರು. ಮೂವರಿಗೂ ತಿಂಗಳಿಗೆ 15 ಸಾವಿರ ರೂ. ಸಂಬಳ ಇತ್ತು. ಟೆಕ್ಕಿ ಕುಟುಂಬ ಆರ್ಥಿಕವಾಗಿ ಸದೃಢವಾಗಿತ್ತು. ಮೊದಲ ಮಗುವಿಗೆ ಮಾನಸಿಕ ತೊಂದರೆ ಇದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ಪೊಲೀಸರಿಗೆ ತಿಳಿಸಿದ್ದಾರೆ.
ಸದ್ಯ ಘಟನಾ ಸ್ಥಳದಲ್ಲಿ ಸದಾಶಿವನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಸಂಜೆ ವೇಳೆಗೆ ಬೆಂಗಳೂರಿಗೆ ಬರುವ ನಿರೀಕ್ಷೆಯಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ.
A 38-year-old software engineer along with his wife ended their lives after allegedly killing their minor children aged five and two years at their residence in RMV 2nd stage in Bengaluru on January 6.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm