ಬ್ರೇಕಿಂಗ್ ನ್ಯೂಸ್
08-01-25 11:43 am Bangalore Correspondent ಕರ್ನಾಟಕ
ಬೆಂಗಳೂರು, ಜ 07: ಎಚ್ಎಂಪಿವಿ ವೈರಾಣುವಿನ ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
'ಇದು ಆತಂಕಾರಿಯಾದ ವೈರಸ್ ಅಲ್ಲ':
ಗಾಂಧಿಭವನದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್ಎಂಪಿವಿ ಬಗ್ಗೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಇದು ಆತಂಕಾರಿಯಾದ ವೈರಸ್ ಅಲ್ಲ. ಅದು ಚೀನಾದಿಂದ ಬಂದಿಲ್ಲ. 2001ರಿಂದಲೇ ಈ ವೈರಾಣು ಪತ್ತೆಯಾಗಿದೆ. ಎಚ್ಎಂಪಿ ವೈರಸ್ ಮಕ್ಕಳಿಗೆ, ವಯಸ್ಸಾದವರಿಗೆ ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಹೆಚ್ಚಾಗಿ ತಗಲುತ್ತದೆ. ಆದರೆ ಅದು ಅಪಾಯಕಾರಿಯಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಆದರೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ ಎಂದು ತಿಳಿಸಿದರು.
ಅನುದಾನ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ;
ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಿಗೆ ಮಂಜೂರಾದ ಹಣವನ್ನು ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಸೂಚನೆ ನೀಡಿದರು.
ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಸರಕಾರ ನಿಗಮಗಳಿಗೆ 446 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಅದರಲ್ಲಿ ಕೇವಲ 260 ಕೋಟಿ ರೂ.ಗಳನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಖರ್ಚು ಮಾಡಲಾಗಿದೆ. ಶೀಘ್ರದಲ್ಲೇ ಹಣಕಾಸು ವರ್ಷ ಮುಗಿಯಲಿದೆ. 2024-25 ನೇ ಸಾಲಿನಲ್ಲಿ ಆಯವ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 5,377 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಇದುವರೆಗೆ 3,631 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಈ ಹಣ ಕೂಡ ಪೂರ್ತಿ ಖರ್ಚು ಮಾಡಿಲ್ಲ. ಜೊತೆಗೆ ಅಂಬೇಡ್ಕರ್ ನಿಗಮದಲ್ಲಿ 900 ಕೋಟಿ ರೂ., ಭೋವಿ ನಿಗಮದಲ್ಲಿ 107 ಕೋಟಿ ರೂ. ಸೇರಿ ಎಲ್ಲಾ ನಿಗಮಗಳಲ್ಲಿ ನೂರಾರು ಕೋಟಿ ಹಣ ಇದ್ದರೂ ಖರ್ಚು ಮಾಡಿಲ್ಲ. ಈ ಸಂಬಂಧ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆಗಳಿಗೆ ನೋಟಿಸ್ ನೀಡಿ, ಅಗತ್ಯ ಬಿದ್ದರೆ ಅಮಾನತು ಮಾಡಿ ಎಂದು ಖಡಕ್ ಸೂಚನೆ ನೀಡಿದರು.
ಮಾರ್ಚ್ ಅಂತ್ಯದವರೆಗೆ ಕಾಯದೆ ಆಯವ್ಯಯದಲ್ಲಿ ಒದಗಿಸಿರುವ ಅನುದಾನ ಸಮರ್ಪಕವಾಗಿ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು. ಇದರಿಂದ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.
There is no need for the public to fear the Human Metapneumovirus (HMPV), said Karnataka Chief Minister Siddaramaiah, appealing to people to remain vigilant. The Health Department has already issued guidelines, he underlined.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 09:29 pm
Mangalore Correspondent
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
Mangalore Kudupu Murder Case, Police Suspende...
01-05-25 12:23 pm
Congress Harish Kumar, Kudupu Murder case, Ma...
30-04-25 11:26 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am