ಬ್ರೇಕಿಂಗ್ ನ್ಯೂಸ್
10-01-25 07:03 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಶರಣಾಗತರಾದ ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಎಸೆದಿದ್ದಾರೆ ಎಂಬುದು ತಿಳಿದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ನಕ್ಸಲರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಹುಡುಕಿಸಬೇಕು. ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಗೊತ್ತಿಲ್ಲ. ಈಗಾಗಲೇ ಇಲಾಖೆಯವರು ಆ ಕೆಲಸ ಮಾಡಿಸ್ತಿದಾರೆ ಎಂದರು. ಶಸ್ತ್ರಾಸ್ತ್ರ ಹಸ್ತಾಂತರಿಸದ್ದಕ್ಕೆ ಬಿಜೆಪಿ ಟೀಕೆ ಬಗ್ಗೆ, ಬಿಜೆಪಿಯವರು ಹೇಳ್ತಾ ಇರ್ತಾರೆ. ನಾವು ಮಾಡುವ ಕೆಲಸ ಮಾಡ್ತಾ ಇರ್ತೇವೆ. ಶಸ್ತ್ರಾಸ್ತ್ರ ಹುಡುಕಿಸಬೇಕು. ಈ ಬಗ್ಗೆ ಶರಣಾಗತರಾದ ಮಾವೋವಾದಿಗಳ ಬಳಿ ಕೇಳುತ್ತೇವೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಅವರಿಂದ ಸಹಾಯ ತೆಗೆದುಕೊಳ್ಳುತ್ತೇವೆ, ಅದೆಕ್ಕೆಲ್ಲ ಕೆಲವೊಂದು ಪ್ರಕ್ರಿಯೆಗಳು ಇರುತ್ತವೆ. ಬಿಜೆಪಿಯವರಿಗೆ ಏನು ಗೊತ್ತಿಲ್ವಾ? ಅವರು ಕೂಡ ಸರ್ಕಾರ ನಡೆಸಿದ್ದರು. ಆಗ ಪೊಲೀಸ್ ಇಲಾಖೆ ಬೇರೆ ಇರಲಿಲ್ಲ ಎಂದರು.
ಇನ್ನೋರ್ವ ನಕ್ಸಲ್ ತಪ್ಪಿಸಿಕೊಂಡ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಶರಣಾಗತರಾದ ಮಾವೋವಾದಿಗಳ ತಂಡ ಅವರನ್ನು ಹೊರಹಾಕಿದ್ದರು ಅಂತ ಇದೆ. ಅದಕ್ಕೆ ಕಾರಣ ಏನು ಅಂತ ಗೊತ್ತಿಲ್ಲ, ಅವರನ್ನು ಹುಡುಕಿಸುತ್ತೇವೆ. ಅವರು ಚಿಕ್ಕಮಗಳೂರು ಭಾಗದಲ್ಲಿದ್ದಾರೆ ಎನ್ನುವ ಮಾಹಿತಿ ಇದೆ. ಅವರನ್ನು ಹುಡುಕಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಆರು ಜನ ಇದ್ದಾರೆ ಅನ್ನೋದು ಇತ್ತು. ಬೇರೆ ರಾಜ್ಯದಿಂದ ಬಂದರೆ ಅದರ ಮೇಲೆ ನಿಗಾ ಇಡಲಾಗುತ್ತದೆ. ಹೊರ ರಾಜ್ಯಗಳಿಂದ ಅಂದರೆ ಒರಿಸ್ಸಾ, ಕೇರಳದಿಂದ ಮಾವೋವಾದಿಗಳು ಬರುವ ಸಾಧ್ಯತೆ ಇರುತ್ತದೆ. ಅದರ ಮೇಲೆ ನಾವು ನಿಗಾ ಇಡುತ್ತೇವೆ ಎಂದು ತಿಳಿಸಿದರು.
ಮಾವೋವಾದಿಗಳನ್ನು ಮುಖ್ಯಮಂತ್ರಿಗಳು ಮುಖ್ಯವಾಹಿನಿಗೆ ಬನ್ನಿ ಎಂದು ಆಹ್ವಾನ ನೀಡಿದ್ದರು. ಕಾನೂನಿನ ಮೂಲಕ ಹೋರಾಟ ಮಾಡಿಕೊಳ್ಳಿ ಎಂದು ಕರೆ ಕೊಟ್ಟಿದ್ದರು. ಶಸ್ತ್ರಾಸ್ತ್ರ ಇಟ್ಟುಕೊಂಡು ಹೋರಾಟ ಮಾಡೋದು ಬೇಡ ಅಂತ ಸಿಎಂ ಮನವಿ ಮಾಡಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.
ಪೊಲೀಸ್ ಎನ್ಕೌಂಟರ್ ನಲ್ಲಿ ಬಲಿಯಾದ ವಿಕ್ರಮ್ ಗೌಡ ಕುಟುಂಬಕ್ಕೆ ಪರಿಹಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ಅದನ್ನು ಕೂಡ ಪರಿಶೀಲನೆ ಮಾಡುತ್ತೇವೆ. ಆದರೆ ಆ ಪ್ರಕರಣ ಬೇರೆ, ಈ ಪ್ರಕರಣ ಬೇರೆ ಎಂದು ಹೇಳಿದರು.
Karnataka Home Minister G Parameshwara on Friday said that six surrendered Maoists have not handed over their weapons, and the police are working to locate and recover them from the forest where they are believed to have been disposed of.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm