ಬ್ರೇಕಿಂಗ್ ನ್ಯೂಸ್
11-01-25 10:53 pm HK News Desk ಕರ್ನಾಟಕ
ವಿಜಯಪುರ, ಜ 11: 'ನೀವು ಸಾಬರಿಗೆ ಮುತ್ತು ಕೊಡಿ. ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಆರೋಪಿಗಳಿಗೆ ಮುತ್ತು ಕೊಡಿ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ ಮುತ್ತು ಕೊಡ್ರಿ. ಅವರಿಗೆಲ್ಲ ದಿನಾಲು ಮುತ್ತು ಕೊಡುತ್ತಾ ಹೋಗಿ, ಭವಿಷ್ಯದ ದಿನಗಳಲ್ಲಿ ನೀವು ಮುತ್ತು ಕೊಡುವ ಗೃಹ ಸಚಿವರಾಗಿ,' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗೃಹ ಸಚಿವ ಜಿ. ಪರಮೇಶ್ವರ ವಿರುದ್ಧ ವಾಗ್ದಾಳಿ ನಡೆಸಿದರು.
'ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದಾಗ ಲಾಠಿ ಚಾರ್ಜ್ ಮಾಡಲಿಲ್ಲ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರ ಮೇಲೆ ಲಾಠಿ ಚಾರ್ಜ್ ಮಾಡಲಿಲ್ಲ. ಮೀಸಲಾತಿ ಕೇಳಿದ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿಸಿದಿರಿ,' ಎಂದು 'ಮುತ್ತು ಕೊಡಬೇಕಿತ್ತೆ' ಎಂಬ ಪರಮೇಶ್ವರ ಹೇಳಿಕೆಗೆ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ತಿರುಗೇಟು ನೀಡಿದರು
'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉಳಿದಿಲ್ಲ. ಸುವರ್ಣ ಸೌಧದಲ್ಲಿ ಗುಂಡಾಗಳು ಹೊಕ್ಕಿದ್ದಾರೆ. ಸಾಕಷ್ಟು ಭದ್ರತೆ ಇದ್ದಾಗ ಗುಂಡಾಗಳು ಒಳಗೆ ಬಂದು ಸಿ.ಟಿ ರವಿ ಮೇಲೆ ಅಟ್ಯಾಕ್ ಮಾಡಲು ಮುಂದಾಗುತ್ತಾರೆ. ಹೀಗಾದರೆ ಕಾನೂನು ಸುವ್ಯವಸ್ಥೆ ಎಲ್ಲಿದೆ, ಯಾವ ಅಧಿಕಾರಿಯನ್ನು ಅಮಾನತು ಮಾಡಿದ್ದಾರೆ,' ಎಂದು ಸರಕಾರದ ವಿರುದ್ಧ ಹರಿಹಾಯ್ದರು.
ಲಾಠಿ ಬೀಸದೆ ಮುತ್ತು ಕೊಡಬೇಕಾ ಎಂದಿದ್ದರು ಜಿ.ಪರಮೇಶ್ವರ್!
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ಹೊತ್ತಿನಲ್ಲಿ 2A ಮೀಸಲಾತಿ ಜಾರಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದ ವೇಳೆ ಲಾಠಿಚಾರ್ಜ್ ನಡೆದಿತ್ತು. ಇದು ಬಿಜೆಪಿ ಹಾಗೂ ಪಂಚಮಸಾಲಿ ಸಮುದಾಯದ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂದರ್ಭ ಲಾಠಿಚಾರ್ಜ್ ನಡೆದ ಬಗ್ಗೆ ಗೃಹ ಸಚಿವ ಪ್ರತಿಕ್ರಿಯಿಸಿ, 'ಪೊಲೀಸರ ಮನವೊಲಿಕೆ ಪ್ರಯತ್ನದ ಬಳಿಕವೂ ನಿಷೇಧಾಜ್ಞೆ ಉಲ್ಲಂಘಿಸಿ 10 ಸಾವಿರ ಮಂದಿ ಹೋರಾಟಗಾರರು ಸುವರ್ಣಸೌಧ ಕಡೆಗೆ ನುಗ್ಗಲು ಯತ್ನಿಸಿದ್ದರು. ಹೀಗಿದ್ದಾಗ ಲಾಠಿ ಚಾರ್ಜ್ ಮಾಡದೆ ಮುತ್ತು ಕೊಡಬೇಕಾ?' ಎಂದು ಪ್ರಶ್ನಿಸಿದ್ದರು.
ವಿಜಯೇಂದ್ರಗೆ ಪ್ರಿಯಾಂಕ್ ಧಮ್ಕಿ
'ಕಲಬುರಗಿಯಲ್ಲಿ ನಡೆದ ಹೋರಾಟಕ್ಕೆ ವಿಜಯೇಂದ್ರ ಬರಲೇ ಇಲ್ಲ. ಪ್ರಿಯಾಂಕ್ ಖರ್ಗೆ ನಿಮ್ಮ ತಂದೆಯ ಹಗರಣ ಹೊರಗೆ ತೆಗೆಯುತ್ತೇನೆ ಎಂದು ಧಮ್ಕಿ ಹಾಕಿದ್ದಾರಂತೆ. ಅದಕ್ಕೆ ವಿಜಯೇಂದ್ರ ಕಲಬುರಗಿಗೆ ಕಾಲಿಡಲಿಲ್ಲ,' ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
Home Minister Parameshwara is busy kissing muslims and accused of DJ and KJ halli slams Yatnal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm