ಬ್ರೇಕಿಂಗ್ ನ್ಯೂಸ್
11-01-25 10:53 pm HK News Desk ಕರ್ನಾಟಕ
ವಿಜಯಪುರ, ಜ 11: 'ನೀವು ಸಾಬರಿಗೆ ಮುತ್ತು ಕೊಡಿ. ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಆರೋಪಿಗಳಿಗೆ ಮುತ್ತು ಕೊಡಿ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ ಮುತ್ತು ಕೊಡ್ರಿ. ಅವರಿಗೆಲ್ಲ ದಿನಾಲು ಮುತ್ತು ಕೊಡುತ್ತಾ ಹೋಗಿ, ಭವಿಷ್ಯದ ದಿನಗಳಲ್ಲಿ ನೀವು ಮುತ್ತು ಕೊಡುವ ಗೃಹ ಸಚಿವರಾಗಿ,' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗೃಹ ಸಚಿವ ಜಿ. ಪರಮೇಶ್ವರ ವಿರುದ್ಧ ವಾಗ್ದಾಳಿ ನಡೆಸಿದರು.
'ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದಾಗ ಲಾಠಿ ಚಾರ್ಜ್ ಮಾಡಲಿಲ್ಲ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರ ಮೇಲೆ ಲಾಠಿ ಚಾರ್ಜ್ ಮಾಡಲಿಲ್ಲ. ಮೀಸಲಾತಿ ಕೇಳಿದ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿಸಿದಿರಿ,' ಎಂದು 'ಮುತ್ತು ಕೊಡಬೇಕಿತ್ತೆ' ಎಂಬ ಪರಮೇಶ್ವರ ಹೇಳಿಕೆಗೆ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ತಿರುಗೇಟು ನೀಡಿದರು
'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉಳಿದಿಲ್ಲ. ಸುವರ್ಣ ಸೌಧದಲ್ಲಿ ಗುಂಡಾಗಳು ಹೊಕ್ಕಿದ್ದಾರೆ. ಸಾಕಷ್ಟು ಭದ್ರತೆ ಇದ್ದಾಗ ಗುಂಡಾಗಳು ಒಳಗೆ ಬಂದು ಸಿ.ಟಿ ರವಿ ಮೇಲೆ ಅಟ್ಯಾಕ್ ಮಾಡಲು ಮುಂದಾಗುತ್ತಾರೆ. ಹೀಗಾದರೆ ಕಾನೂನು ಸುವ್ಯವಸ್ಥೆ ಎಲ್ಲಿದೆ, ಯಾವ ಅಧಿಕಾರಿಯನ್ನು ಅಮಾನತು ಮಾಡಿದ್ದಾರೆ,' ಎಂದು ಸರಕಾರದ ವಿರುದ್ಧ ಹರಿಹಾಯ್ದರು.
ಲಾಠಿ ಬೀಸದೆ ಮುತ್ತು ಕೊಡಬೇಕಾ ಎಂದಿದ್ದರು ಜಿ.ಪರಮೇಶ್ವರ್!
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ಹೊತ್ತಿನಲ್ಲಿ 2A ಮೀಸಲಾತಿ ಜಾರಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದ ವೇಳೆ ಲಾಠಿಚಾರ್ಜ್ ನಡೆದಿತ್ತು. ಇದು ಬಿಜೆಪಿ ಹಾಗೂ ಪಂಚಮಸಾಲಿ ಸಮುದಾಯದ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂದರ್ಭ ಲಾಠಿಚಾರ್ಜ್ ನಡೆದ ಬಗ್ಗೆ ಗೃಹ ಸಚಿವ ಪ್ರತಿಕ್ರಿಯಿಸಿ, 'ಪೊಲೀಸರ ಮನವೊಲಿಕೆ ಪ್ರಯತ್ನದ ಬಳಿಕವೂ ನಿಷೇಧಾಜ್ಞೆ ಉಲ್ಲಂಘಿಸಿ 10 ಸಾವಿರ ಮಂದಿ ಹೋರಾಟಗಾರರು ಸುವರ್ಣಸೌಧ ಕಡೆಗೆ ನುಗ್ಗಲು ಯತ್ನಿಸಿದ್ದರು. ಹೀಗಿದ್ದಾಗ ಲಾಠಿ ಚಾರ್ಜ್ ಮಾಡದೆ ಮುತ್ತು ಕೊಡಬೇಕಾ?' ಎಂದು ಪ್ರಶ್ನಿಸಿದ್ದರು.
ವಿಜಯೇಂದ್ರಗೆ ಪ್ರಿಯಾಂಕ್ ಧಮ್ಕಿ
'ಕಲಬುರಗಿಯಲ್ಲಿ ನಡೆದ ಹೋರಾಟಕ್ಕೆ ವಿಜಯೇಂದ್ರ ಬರಲೇ ಇಲ್ಲ. ಪ್ರಿಯಾಂಕ್ ಖರ್ಗೆ ನಿಮ್ಮ ತಂದೆಯ ಹಗರಣ ಹೊರಗೆ ತೆಗೆಯುತ್ತೇನೆ ಎಂದು ಧಮ್ಕಿ ಹಾಕಿದ್ದಾರಂತೆ. ಅದಕ್ಕೆ ವಿಜಯೇಂದ್ರ ಕಲಬುರಗಿಗೆ ಕಾಲಿಡಲಿಲ್ಲ,' ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
Home Minister Parameshwara is busy kissing muslims and accused of DJ and KJ halli slams Yatnal.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am