ಬ್ರೇಕಿಂಗ್ ನ್ಯೂಸ್
15-01-25 12:19 pm HK News Desk ಕರ್ನಾಟಕ
ಬೆಂಗಳೂರು, ಜ.15: ಕಿಯೋನಿಕ್ಸ್ ಹಗರಣದ ಬಗ್ಗೆ ತನಿಖೆ ನಡೆಸಲಾಗುವುದು. ಹಗರಣದಲ್ಲಿ ಭಾಗಿಯಾದವರ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕಿಯೋನಿಕ್ಸ್ ಅಧ್ಯಕ್ಷ, ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ.
ಕಿಯೋನಿಕ್ಸ್ ವೆಂಡರ್ಸ್ ದಯಾಮರಣಕ್ಕಾಗಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅಕೌಂಟೆಂಟ್ ಜನರಲ್ ವರದಿಯಲ್ಲಿ ಸರ್ಕಾರದ ಖಜಾನೆಗೆ ನೂರಾರು ಕೋಟಿ ನಷ್ಟ ಆಗಿರುವುದಾಗಿ ಮಾಹಿತಿ ಇದೆ. ಮಹೇಶ್ವರ್ ರಾವ್ ಕಮಿಟಿ ವರದಿ ಪಡೆದು ಬಿಲ್ ಕ್ಲಿಯರ್ ಮಾಡುತ್ತೇವೆ. ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿರುವುದು ಸಾಬೀತಾದರೆ ಕ್ರಮ ತೆಗೆದುಕೊಳ್ಳುತ್ತೇವೆ. ಬೆಲೆ ನಿಗದಿ ವಿಚಾರದಲ್ಲೂ ಮಾರ್ಕೆಟ್ ಬೆಲೆಗಿಂತ ಹೆಚ್ಚಿನ ಬೆಲೆಗೆ ಸಪ್ಲೈ ಮಾಡಿರುವ ಆರೋಪ ಇದೆ. 2021, 22, 23ನೇ ಸಾಲಿನ ಮೂರು ವರ್ಷದ ಖರ್ಚು ವೆಚ್ಚಗಳ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು ವರದಿ ಪಡೆಯುತ್ತೇನೆ ಎಂದು ತಿಳಿಸಿದರು.
ಐಟಿ, ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಅಕೌಂಟೆಂಟ್ ಜನರಲ್ ಅವರು ಯಾವುದೇ ಮಾನದಂಡ ಪಾಲಿಸದೇ ಪರ್ಚೇಸಿಂಗ್ ಬಿಲ್ಲಿಂಗ್ ಟೆಂಡರ್ ಮಾಡಿದ್ದಾರೆ ಮತ್ತು ಡೂಪ್ಲಿಕೇಟ್ ಬಿಲ್, ಮಾರ್ಕೆಟ್ ರೇಟ್ಗಿಂತ ಹೆಚ್ಚಿನ ದರಕ್ಕೆ ಮೆಟಿರಿಯಲ್ ಸಪ್ಲೈ ಆರೋಪ ಇದೆ. ಅಂದಾಜು 500 ಕೋಟಿ ರೂ. ಅವ್ಯವಹಾರ ಕಂಡು ಬಂದಿದೆ. ಆಡಿಟ್ ರಿಪೋರ್ಟ್ನಲ್ಲಿ 300 ಕೋಟಿ ರೂ. ಆಡಿಟ್ ಅಬ್ಜಕ್ಷನ್ ಇದೆ. ನಾಲ್ಕು ವರ್ಷದ ಆಡಿಟ್ ರಿಪೋರ್ಟ್ ಮಾಡಬೇಕಿದೆ. ಇದಕ್ಕೆ ಕಾಲಾವಕಾಶ ಬೇಕಿದ್ದು, ರಿಪೋರ್ಟ್ ಆಧಾರದ ಮೇಲೆ ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡರೆ ಇವರೇ ಕಾರಣ..!
ದಯಾಮರಣ ಕೋರಿ ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಷನ್ ಸದಸ್ಯರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, ವೆಂಡರ್ಸ್ಗಳ ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲ. ಒಂದು ವರ್ಷದಿಂದ ತನಿಖೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ. 400 ರಿಂದ 500 ವೆಂಡರ್ಸ್ಗಳಿಗೆ ಬಿಲ್ ಪಾವತಿ ಬಾಕಿ ಇಡಲಾಗಿದೆ. ನಮ್ಮ ಕಷ್ಟವನ್ನು ಐಟಿ, ಬಿಟಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಆಲಿಸುತ್ತಿಲ್ಲ. ಯಾರಾದರೂ ವೆಂಡರ್ಸ್ ಆತ್ಮಹತ್ಯೆ ಮಾಡಿಕೊಂಡರೆ ಪ್ರಿಯಾಂಕ್ ಖರ್ಗೆ, ಶರತ್ ಬಚ್ಚೇಗೌಡ, ಕಿಯೋನಿಕ್ಸ್ ಸಿಇಓ ಪವನ್ ಕುಮಾರ್, ಕಿಯೋನಿಕ್ಸ್ ಹಣಕಾಸು ವಿಭಾಗದ ನಿಶ್ಚಿತ್ ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
In what could snowball into another controversy involving IT-BT minister Priyank Kharge, vendors associated with state-run Karnataka State Electronics Development Corporation (Keonics) have written to President Droupadi Murmu, Prime Minister Narendra Modi and governor Thaawar Chand Ghelot, requesting permission to be ‘euthanised' since dues have not been paid for 18 months now.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm