ಬ್ರೇಕಿಂಗ್ ನ್ಯೂಸ್
18-01-25 05:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮುಡಾ ಸೈಟ್ ಪ್ರಕರಣ ಮತ್ತಷ್ಟು ಕೊರಳು ಸುತ್ತಿಕೊಂಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪ್ರಕರಣ ಸಂಬಂಧಿಸಿ 300 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಆಸ್ತಿ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಇಡಿ ಮಾಹಿತಿ ಪ್ರಕಾರ, ತನಿಖಾ ಸಂಸ್ಥೆ ವಶಕ್ಕೆ ಪಡೆದಿರುವ 142 ಸ್ಥಿರಾಸ್ತಿಗಳ ಒಟ್ಟು ಮೌಲ್ಯ 300 ಕೋಟಿ ರೂಪಾಯಿ ಎಂದು ಅಂದಾಜು ಮಾಡಲಾಗಿದೆ. ಈ ಬಗ್ಗೆ ಟ್ವಿಟರ್ ನಲ್ಲಿ ಜಾರಿ ನಿರ್ದೇಶನಾಲಯ ಅಧಿಕೃತ ಮಾಹಿತಿ ನೀಡಿದೆ.
ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇಡಿ ಅಧಿಕಾರಿಗಳು ಕಳೆದ ನಾಲ್ಕು ತಿಂಗಳಿನಿಂದ ತನಿಖೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳು, ಏಜೆಂಟರಾಗಿ ಕೆಲಸ ಮಾಡುವವರ ಹೆಸರಿನಲ್ಲಿ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಸ್ನೇಹಮಯಿ ಕೃಷ್ಣ ದೂರಿನಂತೆ ಇಡಿ ಎಂಟ್ರಿಯಾಗಿದ್ದು ಈಗ ಅಕ್ರಮವೆಂದು ಗುರುತಿಸಲ್ಪಟ್ಟ ಆಸ್ತಿಯನ್ನ ಜಪ್ತಿ ಮಾಡಿದೆ.
ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್ಗಳಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿತ್ತು ಎಂದು ಮಾಧ್ಯಮ ಪ್ರಕಟಣೆಯಲ್ಲಿ ಇಡಿ ಹೇಳಿದೆ. ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳನ್ನು ಪಡೆಯಲು ರಾಜಕೀಯ ಪ್ರಭಾವ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
The Enforcement Directorate (ED) has attached 142 immovable properties having a market value of ₹300 crore in connection with the Mysuru Urban Development Authority (MUDA) case against Karnataka Chief Minister Siddaramaiah, and others.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm