ಬ್ರೇಕಿಂಗ್ ನ್ಯೂಸ್
20-01-25 07:00 pm HK News Desk ಕರ್ನಾಟಕ
ದಾವಣಗೆರೆ, ಜ.20: ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ಬೇಕು, ಯತ್ನಾಳ್ ಅಂಥವರನ್ನ ಅಧ್ಯಕ್ಷರನ್ನಾಗಿ ಮಾಡಿ, ಇಲ್ಲವೇ ವಿಪಕ್ಷ ನಾಯಕ ಆಗುತ್ತಾರೆ" ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಭಯದ ವಾತಾವರಣ ಸೃಷ್ಟಿಸುವ ಹೇಳಿಕೆ, ಬಾಲಿಶವಾಗಿದೆ. ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆತಂದು ಯಡಿಯೂರಪ್ಪನವರನ್ನು ಸಿಎಂ ಮಾಡಿದ್ದು ನೆನಪು ಇದೆ ಎಂದುಕೊಂಡಿದ್ದೇನೆ. ಪದೇ ಪದೆ ಪೂಜ್ಯ ತಂದೆ ಎಂದು ಹೇಳುವುದನ್ನು ಬಿಡಿ, ಪೂಜ್ಯ ತಂದೆಯವರನ್ನ ಬೇಡ ಎಂದು ಮನೆಗೆ ಕಳಿಸಿದ್ದಾರೆ, ನಿಮಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆದರೆ ನಿಮ್ಮ ಸಾಧನೆ ಶೂನ್ಯ" ಎಂದು ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
"ನಾಗರಾಜಗೌಡಗೆ ಶಿಕಾರಿಪುರದ ಟಿಕೆಟ್ ತಪ್ಪಿಸಿ ವಿಜಯೇಂದ್ರಗೆ ಭಿಕ್ಷೆ ಕೊಟ್ಟಿದ್ದೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದರು. ಇದಕ್ಕೆ ವಿಜಯೇಂದ್ರ ಉತ್ತರ ಕೊಡಬೇಕಲ್ವಾ? ಇಲ್ಲ ನಾನು ನ್ಯಾಯಯುತವಾಗಿ ಗೆದ್ದಿದ್ದೇನೆ ಎಂದು ಹೇಳಬೇಕಲ್ವಾ?. ಇದರುವರೆಗೆ ಅವರು ಉತ್ತರ ಕೊಟ್ಟಿಲ್ಲ. ಇದರ ಜೊತೆಗೆ ವಿಜಯೇಂದ್ರ ತಮ್ಮ ತಂದೆಯ ಫೋರ್ಜರಿ ಸಹಿ ಮಾಡಿದ್ದಾರೆ ಎಂದು ಸಚಿವರು ಆರೋಪಿಸುತ್ತಿದ್ದಾರೆ. ಅದು ಸುಳ್ಳು ಎಂದು ವಿಜಯೇಂದ್ರ ಹೇಳಬೇಕಲ್ವಾ?" ಎಂದು ಶಾಸಕ ಬಿ ಪಿ ಹರೀಶ್ ಪ್ರಶ್ನಿಸಿದರು.
"ವಿಜಯೇಂದ್ರ ಯಾವುದಕ್ಕೂ ಉತ್ತರ ಕೊಟ್ಟಿಲ್ಲ, ಇದರಿಂದ ನಮಗೆ ನಾಚಿಕೆ ಆಗ್ತಿದೆ. ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ ಎಂದರೆ ಅಧ್ಯಕ್ಷರು ಹಿಂಬಾಗಿಲಿನಿಂದ ಹೋಗ್ತಾರೆ. ಅವರಿಂದ ವಿಧಾನಸೌಧದಲ್ಲಿ ನಮಗೆ ಮುಜುಗರ ಆಗ್ತಿದೆ" ಎಂದು ಹೇಳಿದರು.
BJP MLA BP Harish demands resignation of B. Y. Vijayendra, says make yatnal as president of BJP party.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm