ಬ್ರೇಕಿಂಗ್ ನ್ಯೂಸ್
21-01-25 10:59 pm HK News Desk ಕರ್ನಾಟಕ
ಬೆಳಗಾವಿ, ಜ 21: ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ಬಂದಿಲ್ಲ ಎಂದು ಯಾರಾದರೂ ಹೇಳುವುದನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಖಂಡಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ 'ಜೈ ಬಾಪೂ, ಜೈ ಭೀಮ್, ಜೈ ಸಂವಿಧಾನ್' ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ದೇಶದ ಸ್ವಾತಂತ್ರ್ಯದ ಬಗ್ಗೆ ಇಷ್ಟು ಹಗುರವಾಗಿ ಮಾತನಾಡಿದವರನ್ನು ಇನ್ನೂ ಏಕೆ ಬಂಧಿಸಿಲ್ಲ ಎಂಬುದು ಅರ್ಥವಾಗುತ್ತಿಲ್ಲ ಎಂದು ಹರಿಹಾಯ್ದರು.
"ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ಬಂದಿಲ್ಲ, ಬದಲಿಗೆ ರಾಮ ಮಂದಿರ ಉದ್ಘಾಟನೆ ದಿನವೇ ದೇಶದ ಅಸಲಿ ಸ್ವಾತಂತ್ರ್ಯ ದಿನ ಎಂಬ ಮೋಹನ್ ಭಾಗವತ್ ಹೇಳಿಕೆ, ಸ್ವಾತಂತ್ರ್ಯದ ಬಗ್ಗೆ ಮತ್ತು ಸಂವಿಧಾನದ ಬಗ್ಗೆ ಆರ್ಎಸ್ಎಸ್ ಮತ್ತು ಬಿಜೆಪಿಯ ನಿಲುವೇನು ಎಂಬುದನ್ನು ಸ್ಪಷ್ಟಪಡಿಸುತ್ತದೆ. ಇಂತಹ ಕ್ಷುಲ್ಲಕ ಹೇಳಿಕೆಯನ್ನು ಯಾರಾದರೂ ನೀಡುವ ಪರಿಸ್ಥಿತಿ ಇಂದು ಉದ್ಭವವಾಗಿರುವುದು ನಿಜಕ್ಕೂ ದೇಶದ ದುರ್ದೈವ.."ಎಂದು ಪ್ರಿಯಂಕಾ ಗಾಂಧಿ ಕಿಡಿಕಾರಿದರು.
"ಮೋಹನಹ್ ಭಾಗವತ್ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಲಕ್ಷಾಂತರ ಜನರನ್ನು ಅವಮಾನಿಸಿದ್ದಾರೆ. ಇಡೀ ಸ್ವಾತಂತ್ರ್ಯ ಚಳುವಳಿಯನ್ನೇ ಆರ್ಎಸ್ಎಸ್ ಮುಖ್ಯಸ್ಥರು ಅವಮಾನಿಸಿದ್ದಾರೆ. ಆದರೆ ಮೋಹನ್ ಭಾಗವತ್ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸುವ ಧೈರ್ಯ ಮಾಡುತ್ತಿಲ್ಲ.." ಎಂದು ಪ್ರಿಯಾಂಕಾ ಗಾಂಧಿ ತರಾಟೆಗೆ ತೆಗೆದುಕೊಂಡರು.
"ದೇಶದ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಬಹಿರಂಗವಾಗಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡುತ್ತಾರೆ. ಆರ್ಎಸ್ಎಸ್ ಮುಖ್ಯಸ್ಥರು ಸ್ವಾತಂತ್ರ್ಯ ಚಳುವಳಿ ಕುರಿತು ಲಘುವಾಗಿ ಮಾತನಾಡುತ್ತಾರೆ. ಇಂತಹ ಪರಿಸ್ಥಿತಿ ಉದ್ಭವವಾಗಿರುವುದು ನಿಜಕ್ಕೂ ದುರಂತ.." ಎಂದು ಕಾಂಗ್ರೆಸ್ ಸಂಸದೆ ವಾಗ್ದಾಳಿ ನಡೆಸಿದರು.
ಇನ್ನು ಬಿಜೆಪಿ, ಆರ್ಎಸ್ಎಸ್ ವಿರುದ್ಧ ಶಕ್ತಿಶಾಲಿಯಾಗಿ ಹೋರಾಟ ಮಾಡುವ ಹೆಣ್ಣುಮಗಳು ಪ್ರಿಯಾಂಕಾ ಗಾಂಧಿ. ಪ್ರಿಯಾಂಕಾ ಮೆತ್ತಗೆ ಕಾಣುತ್ತಾರೆ, ಮುಟ್ಟಿ ನೋಡಿ. ನಮ್ಮ ಕಿತ್ತೂರು ಚನ್ನಮ್ಮ ಪ್ರಿಯಾಂಕಾ ಗಾಂಧಿ. ನಾನೇನು ಹೊಗಳುತ್ತಿಲ್ಲ. ಅವರಿಗೆ ಅಷ್ಟೊಂದು ಶಕ್ತಿ ಇದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ಪಟ್ಟರು.
ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಂದೆ ಕಳೆದುಕೊಂಡಾಗ ಪ್ರಿಯಾಂಕಾ ಅವರಿಗೆ ನಾಲ್ಕೈದು ವರ್ಷ. ತಾಯಿ ರಕ್ಷಣೆಯಲ್ಲಿ ಬೆಳೆದು ಬಂದ ಅವರು ಇಂದು ಈ ಹಂತಕ್ಕೆ ಬಂದು ನಿಂತಿದ್ದಾರೆ. ಪ್ರಿಯಾಂಕಾ ಎಂದೂ ಕೂಡ ತನ್ನ ಕೊರತೆ, ಕಮಜೋರಿ ದೇಶಕ್ಕೆ ತೋರಿಸಿದವರಲ್ಲ. ಗಾಂಧಿ ಕುಟುಂಬ ಅಂಥದ್ದು. ಇಂಥ ಕುಟುಂಬಕ್ಕೆ ಮೋದಿ, ಅಮಿತ್ ಶಾ ಮತ್ತು ಅವರ ಚಮಚಾಗಳೂ ಬೈಯ್ಯುತ್ತಾರೆ. ದೇಶದ ಜನ ಹೆದರಬೇಕಿಲ್ಲ. ಬಿಜೆಪಿ ವಿರುದ್ಧ ಹೋರಾಡಲು ನಾವು ಸಿದ್ಧರಾಗಿದ್ದೇವೆ ಎಂದು ಖರ್ಗೆ ಎಚ್ಚರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಗಿದ್ದ ನನ್ನನ್ನ ರಾಷ್ಟ್ರ ಅಧ್ಯಕ್ಷರನ್ನಾಗಿಸಿದ್ದಾರೆ: ಬ್ಲಾಕ್ ಕಾಂಗ್ರೆಸ್ ಆಗಿದ್ದ ನಾನು ಇಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನಾಯಕನನ್ನಾಗಿ ಮಾಡಿದ್ದಾರೆ. ಇದು ಸಣ್ಣ ಮಾತಲ್ಲ. ಚುನಾವಣೆ ಆದರೂ ನನ್ನೊಂದಿಗೆ ಇದ್ದು ಕೈಜೋಡಿಸಿ, ಸಹಾಯ ಮಾಡಿ ಇಂದು ಆರಿಸಿ ತಂದಿದ್ದಾರೆ. ಅದಕ್ಕಾಗಿ ನಾನು ಅವರಿಗೆಲ್ಲ ಚಿರ ಋಣಿ ಇದ್ದೇನೆ. ಕರ್ನಾಟಕ ಕಾಂಗ್ರೆಸ್ನ ಒಬ್ಬ ಕಾರ್ಯಕರ್ತ ಅಖಿಲ ಭಾರತ ಮಟ್ಟದ ಅಧ್ಯಕ್ಷನಾಗಲು ನಿಮ್ಮೆಲ್ಲರ ಆಶೀರ್ವಾದ ಇಲ್ಲದೇ ಸಾಧ್ಯವಿರಲಿಲ್ಲ. ಇದು ಕಾಂಗ್ರೆಸ್ನ ಗುಣ. ಬಿಜೆಪಿಯವರು ಏನೇ ಹೇಳಲಿ, ಬರೀ ಮಾತಲ್ಲಿ ಹೇಳುತ್ತಾರೆ. ಬಿಜೆಪಿ, ಆರ್ಎಸ್ಎಸ್, ಹಿಂದೂ ಮಹಾಸಭಾದವರು ದಲಿತರ ಜತೆಯಲ್ಲಿ ಯಾವತ್ತೂ ಇಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹರಿಹಾಯ್ದರು.
ಕೆಪಿಸಿಸಿ, ಸಿದ್ದರಾಮಯ್ಯಗೆ ಧನ್ಯವಾದ ಸಲ್ಲಿಸುತ್ತೇನೆ: ಇವರು ಯಾವಾಗಲೂ ದಲಿತರ ವಿರೋಧಿಗಳು. ರೈತರು, ಬಡವರು, ದಲಿತರ ಬಗ್ಗೆ ಕಾಳಜಿ ಇಲ್ಲ. ಎಂಎಸ್ಪಿ ಹೆಚ್ಚು ಮಾಡಲು ಮೋದಿ ಅವರು ಎಂದೂ ಗಮನ ಕೊಟ್ಟಿಲ್ಲ. ಆದರೆ, ದಲಿತರ ಪರ ಎಂದು ಪ್ರಚಾರ ಮಾತ್ರ ತೆಗೆದುಕೊಳ್ಳುತ್ತಾರೆ. ಡಿ.26ರಂದು ನಾವು ಹೊಸ ಸಂಕಲ್ಪ ಮಾಡಿದ್ದೇವೆ. ನವಸತ್ಯಾಗ್ರಹ ಸಭೆ ಮಾಡಿದ್ದೇವೆ. ಕರ್ನಾಟಕದ ಕಾಂಗ್ರೆಸ್ ಬಲಶಾಲಿ ಎಂದು ನೀವು ತೋರಿಸಿದ್ದೀರಿ. ಇಷ್ಟು ಅಚ್ಚುಕಟ್ಟಾದ ಕಾರ್ಯಕ್ರಮ ನಾನು ಬೇರೆಲ್ಲೂ ನೋಡಿಲ್ಲ. ಕೆಪಿಸಿಸಿ ಹಾಗೂ ಸಿದ್ದರಾಮಯ್ಯ ಸರ್ಕಾರ ಹಾಗೂ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ. ಇದು ಕಿತ್ತೂರು ರಾಣಿ ಚನ್ನಮ್ಮನ ಜನ್ಮಭೂಮಿ. ಈ ನಾಡಿನಲ್ಲಿ ಹುಟ್ಟಿ ದೇಶದ ಸ್ವಾತಂತ್ರ್ಯದ ರಕ್ಷಣೆಗೆ ಚನ್ನಮ್ಮ ಹೋರಾಡಿದರು ಎಂದು ಖರ್ಗೆ ಅವರು ಸ್ಮರಿಸಿದರು.
ಭಾರತಕ್ಕಾಗಿ ಸಾಯಲು ಬಯಸುತ್ತೇನೆ: ನಾನು ಬದುಕಿರಲು ಬಯಸುತ್ತೇನೆ, ಕೇವಲ ಭಾರತಕ್ಕಾಗಿ ಸಾಯಲು ಬಯಸುತ್ತೇನೆ, ಅದು ಕೇವಲ ಭಾರತಕ್ಕಾಗಿ. ಬದುಕಿದರೂ ದೇಶಕ್ಕಾಗಿ, ಸತ್ತರೂ ದೇಶಕ್ಕಾಗಿ ಎಂಬ ಸಂದೇಶವನ್ನು ಗಾಂಧಿ ಇದೇ ನೆಲದಿಂದ ಕರೆ ಕೊಟ್ಟರು. ಅಂಥವರ ಬಗ್ಗೆಯೂ ಬಿಜೆಪಿಯವರು ಇಂದು ಟೀಕೆ ಮಾಡುತ್ತಾರೆ. ಅವರನ್ನು ಗುಂಡು ಹಾಕಿ ಕೊಂದವರು ಯಾರು? ಗೋಡ್ಸೆ ಯಾರ ಶಿಷ್ಯ, ಸಾವರ್ಕರ್ ಶಿಷ್ಯ. ಇವರೆಲ್ಲರನ್ನೂ ಮೋದಿ, ಶಾ ಅವರು ಹೊತ್ತು ಮೆರೆಯುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ಗಾಂಧಿ – ನೆಹರು ಮಧ್ಯೆ, ಪಟೇಲ್–ಗಾಂಧಿ, ಅಂಬೇಡ್ಕರ್–ಗಾಂಧಿ ಮಧ್ಯೆ ವ್ಯತ್ಯಾಸ ಮತ್ತು ಜಗಳ ಇತ್ತು ಎಂದು ಪ್ರಚಾರ ಮಾಡುತ್ತಾರೆ. ಈಗಿನ ಕಾಂಗ್ರೆಸ್ನಲ್ಲಿಯೂ ವ್ಯತ್ಯಾಸ ತೋರಿಸಿ ಒಡೆದಾಳುತ್ತಿದ್ದಾರೆ. ನಮಗಾಗಿ ಹೋರಾಡಿದ ಮಹಾತ್ಮರಲ್ಲೇ ಬಿಜೆಪಿಯವರು ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ. ಅಹಮಾದಾಬ್ನ ಗುಜರಾತಿನ ಗಾಂಧಿ ಅವರ ಬಗ್ಗೆಯೇ ಮೋದಿಗೆ ಕಳಕಳಿ ಇಲ್ಲ. ಎಂದೂ ಕೂಡ ಒಳ್ಳೆಯ ಮಾತನಾಡಿಲ್ಲ. ಜಯಂತಿಗೆ ಬಂದು ನಮಸ್ಕಾರ ಮಾಡಿ ಹೋಗುತ್ತಾರೆ. ಅವರು ಪೂಜೆ ಮಾಡುವುದು ಗಾಂಧೀಜಿ ಅವರಿಗೆ ಗುಂಡು ಹಾಕಿದ ಗೋಡ್ಸೆಗೆ. ಸಾವರ್ಕರ್ ಅವರೇ ಲೀಡರ್, ಗಾಂಧೀ ಅಲ್ಲ ಎಂದು ಅವರು ಬಿಂಬಿಸಲು ಹೊರಟಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹರಿಹಾಯ್ದರು.
ಗಾಂಧಿ ಕಾಂಗ್ರೆಸ್ ಅಧ್ಯಕ್ಷತೆಯ ಶತಮಾನೋತ್ಸವ: 1924ರಲ್ಲಿ ಅಂಬೇಡ್ಕರ್ ಕೂಡ ‘ಬಹಿಷ್ಕೃತ ಹಿತಕರ್ಣಿ ಸಭಾ’ ಮಾಡಿದರು. ಅದಕ್ಕೂ ಈಗ ನೂರು ವರ್ಷ ಆಗಿದೆ. ಕಾಂಗ್ರೆಸ್ ಅಂಬೇಡ್ಕರ್ಗೆ ಬೆಲೆ ಕೊಡಲಿಲ್ಲ, ಹಿಂಸೆ ಮಾಡಿದರು ಎಂದೆಲ್ಲ ಅಪಪ್ರಚಾರ ಮಾಡುತ್ತಾರೆ. ಇದು ಸಾಧ್ಯವಿಲ್ಲ. ಅಂಬೇಡ್ಕರ್ ಪ್ರತಿಮೆ ಮೊದಲು ನಿರ್ಮಾಣ ಮಾಡಿದ್ದು ಇಂದಿರಾ ಗಾಂಧಿ ಅವರು. ಆದರೆ, ಈ ಮೋದಿ ಅಂಬೇಡ್ಕರ್ ಮೂರ್ತಿ ಮೂಲೆಗೆ ಹಾಕಿದ್ದಾನೆ. ಯಾರು ಬಂದರೂ ಅಂಬೇಡ್ಕರ್ ಕಾಣಿಸುವುದಿಲ್ಲ. ಸಂವಿಧಾನ, ಅಬೇಡ್ಕರ್, ನೆಹರೂ ಮೂರ್ತಿ ಸುಟ್ಟವರು ಬಿಜೆಪಿ-ಆರ್ಎಸ್ಎಸ್, ಹಿಂದೂ ಮಹಾಸಭಾದವರು. ಇದೆಲ್ಲ ಇತಿಹಾಸದಲ್ಲಿದೆ. ನಾನು ಚಾಲೇಂಜ್ ಮಾಡುತ್ತೇನೆ. ಎರಡು ಸಾರಿ ಬಾಬಾಸಾಹೇಬ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದು ಕಾಂಗ್ರೆಸ್ಸಿಗರು. ಅಂಬೇಡ್ಕರ್ ಅವರನ್ನು ಸೋಲಿಸಿದರು ಎಂದು ಹೇಳುತ್ತೀರಿ ಎಂದು ಪ್ರಶ್ನಿಸಿದರು.
Congress MP Priyanka Gandhi Vadra has condemned RSS chief Mohan Bhagwat's statement, saying it is unimaginable that anyone would say that the country did not get independence in 1947.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm