ಬ್ರೇಕಿಂಗ್ ನ್ಯೂಸ್
16-12-20 10:50 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಪೀಠದಲ್ಲಿ ಉಪಸಭಾಪತಿ ಅವರನ್ನು ಕೂರಿಸುತ್ತೇವೆಂದು ಮೊದಲೇ ಪ್ರಕಟಿಸಿದ್ದೆವು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಉಪ ಸಭಾಪತಿ ಅವರೇ ಮುಂದುವರಿಯುತ್ತಾರೆ. ‘ಬೆಲ್' ಚಾಲನೆಯಲ್ಲಿರುವ ವೇಳೆ ಪೀಠಕ್ಕೆ ಬಂದರು ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ನೈತಿಕತೆ ಇದ್ದರೆ ಸಭಾಪತಿಗೆ ರಾಜೀನಾಮೆ ಕೊಡಲು ಸೂಚಿಸಬೇಕಿತ್ತು. ಘಟನೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯೇ ನೇರ ಕಾರಣ
ವಿಧಾನ ಪರಿಷತ್ತಿನಲ್ಲಿ ನಡೆದ ಜಟಾಪಟಿಗೆ ಬಿಜೆಪಿಯೇ ನೇರ ಕಾರಣ. ಚರ್ಚೆಗೆ ಪ್ರತಿಪಕ್ಷ ಕಾಂಗ್ರೆಸ್ ತಯಾರಾಗಿತ್ತು. ಆದರೆ, ನಿಯಮಾವಳಿಯನ್ವಯ ಕಲಾಪ ನಡೆಸಬೇಕೆಂಬುದಷ್ಟೇ ನಮ್ಮ ಬೇಡಿಕೆಯಾಗಿತ್ತು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ.
ಬಿಜೆಪಿ ಸದಸ್ಯರು ಎಲ್ಲ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಭಾಪತಿ ಪೀಠದ ಮುಂದೆ ರಂಪಾಟ ಮಾಡಿದರು. 2009ರಲ್ಲಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ವಿಧಾನಸಭೆಯಲ್ಲಿ ಕಲಾಪ ನಡೆಸಲು ಬಿಡದೇ ಬಿಜೆಪಿ ಪ್ರಜಾಪ್ರಭುತ್ವವನ್ನು ಅಣಕಿಸಿತ್ತು. ಈಗಲೂ ವಿಧಾನ ಪರಿಷತ್ನಲ್ಲಿ ಗದ್ದಲ ಎಬ್ಬಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಿಜೆಪಿ ಅವಮಾನ ಮಾಡಿದೆ ಎಂದು ದೂರಿದರು.

ಪರಿಷತ್ತಿನ ಕಲಾಪದಲ್ಲಿ ಈ ರೀತಿಯ ಅಹಿತಕರ ಘಟನೆ ನಡೆಯಬಾರದಿತ್ತು. ಸದನಕ್ಕೆ ಅಗೌರವ ಸೂಚಿಸಿದ ಇಂತಹ ಘಟನೆ ಯಾವತ್ತು ಆಗಿರಲಿಲ್ಲ. ಉಪ ಸಭಾಪತಿಯವರು ಸಭಾಪತಿ ಸೂಚನೆ ಬಳಿಕ ಪೀಠದಲ್ಲಿ ಕೂರಬೇಕು. ಆದರೆ, ಅವರ ಸೂಚನೆ ಇಲ್ಲದೆಯೆ ಸಭಾಪತಿ ಪೀಠದಲ್ಲಿ ಕೂತಿದ್ದು ತಪ್ಪು ಎಂದು ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm