ಬ್ರೇಕಿಂಗ್ ನ್ಯೂಸ್
16-12-20 10:50 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಪೀಠದಲ್ಲಿ ಉಪಸಭಾಪತಿ ಅವರನ್ನು ಕೂರಿಸುತ್ತೇವೆಂದು ಮೊದಲೇ ಪ್ರಕಟಿಸಿದ್ದೆವು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಉಪ ಸಭಾಪತಿ ಅವರೇ ಮುಂದುವರಿಯುತ್ತಾರೆ. ‘ಬೆಲ್' ಚಾಲನೆಯಲ್ಲಿರುವ ವೇಳೆ ಪೀಠಕ್ಕೆ ಬಂದರು ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ನೈತಿಕತೆ ಇದ್ದರೆ ಸಭಾಪತಿಗೆ ರಾಜೀನಾಮೆ ಕೊಡಲು ಸೂಚಿಸಬೇಕಿತ್ತು. ಘಟನೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯೇ ನೇರ ಕಾರಣ
ವಿಧಾನ ಪರಿಷತ್ತಿನಲ್ಲಿ ನಡೆದ ಜಟಾಪಟಿಗೆ ಬಿಜೆಪಿಯೇ ನೇರ ಕಾರಣ. ಚರ್ಚೆಗೆ ಪ್ರತಿಪಕ್ಷ ಕಾಂಗ್ರೆಸ್ ತಯಾರಾಗಿತ್ತು. ಆದರೆ, ನಿಯಮಾವಳಿಯನ್ವಯ ಕಲಾಪ ನಡೆಸಬೇಕೆಂಬುದಷ್ಟೇ ನಮ್ಮ ಬೇಡಿಕೆಯಾಗಿತ್ತು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ.
ಬಿಜೆಪಿ ಸದಸ್ಯರು ಎಲ್ಲ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಭಾಪತಿ ಪೀಠದ ಮುಂದೆ ರಂಪಾಟ ಮಾಡಿದರು. 2009ರಲ್ಲಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ವಿಧಾನಸಭೆಯಲ್ಲಿ ಕಲಾಪ ನಡೆಸಲು ಬಿಡದೇ ಬಿಜೆಪಿ ಪ್ರಜಾಪ್ರಭುತ್ವವನ್ನು ಅಣಕಿಸಿತ್ತು. ಈಗಲೂ ವಿಧಾನ ಪರಿಷತ್ನಲ್ಲಿ ಗದ್ದಲ ಎಬ್ಬಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಿಜೆಪಿ ಅವಮಾನ ಮಾಡಿದೆ ಎಂದು ದೂರಿದರು.

ಪರಿಷತ್ತಿನ ಕಲಾಪದಲ್ಲಿ ಈ ರೀತಿಯ ಅಹಿತಕರ ಘಟನೆ ನಡೆಯಬಾರದಿತ್ತು. ಸದನಕ್ಕೆ ಅಗೌರವ ಸೂಚಿಸಿದ ಇಂತಹ ಘಟನೆ ಯಾವತ್ತು ಆಗಿರಲಿಲ್ಲ. ಉಪ ಸಭಾಪತಿಯವರು ಸಭಾಪತಿ ಸೂಚನೆ ಬಳಿಕ ಪೀಠದಲ್ಲಿ ಕೂರಬೇಕು. ಆದರೆ, ಅವರ ಸೂಚನೆ ಇಲ್ಲದೆಯೆ ಸಭಾಪತಿ ಪೀಠದಲ್ಲಿ ಕೂತಿದ್ದು ತಪ್ಪು ಎಂದು ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 06:36 pm
HK News Staffer
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am