ಬ್ರೇಕಿಂಗ್ ನ್ಯೂಸ್
16-12-20 10:50 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಪೀಠದಲ್ಲಿ ಉಪಸಭಾಪತಿ ಅವರನ್ನು ಕೂರಿಸುತ್ತೇವೆಂದು ಮೊದಲೇ ಪ್ರಕಟಿಸಿದ್ದೆವು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಉಪ ಸಭಾಪತಿ ಅವರೇ ಮುಂದುವರಿಯುತ್ತಾರೆ. ‘ಬೆಲ್' ಚಾಲನೆಯಲ್ಲಿರುವ ವೇಳೆ ಪೀಠಕ್ಕೆ ಬಂದರು ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ನೈತಿಕತೆ ಇದ್ದರೆ ಸಭಾಪತಿಗೆ ರಾಜೀನಾಮೆ ಕೊಡಲು ಸೂಚಿಸಬೇಕಿತ್ತು. ಘಟನೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯೇ ನೇರ ಕಾರಣ
ವಿಧಾನ ಪರಿಷತ್ತಿನಲ್ಲಿ ನಡೆದ ಜಟಾಪಟಿಗೆ ಬಿಜೆಪಿಯೇ ನೇರ ಕಾರಣ. ಚರ್ಚೆಗೆ ಪ್ರತಿಪಕ್ಷ ಕಾಂಗ್ರೆಸ್ ತಯಾರಾಗಿತ್ತು. ಆದರೆ, ನಿಯಮಾವಳಿಯನ್ವಯ ಕಲಾಪ ನಡೆಸಬೇಕೆಂಬುದಷ್ಟೇ ನಮ್ಮ ಬೇಡಿಕೆಯಾಗಿತ್ತು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ.
ಬಿಜೆಪಿ ಸದಸ್ಯರು ಎಲ್ಲ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಭಾಪತಿ ಪೀಠದ ಮುಂದೆ ರಂಪಾಟ ಮಾಡಿದರು. 2009ರಲ್ಲಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ವಿಧಾನಸಭೆಯಲ್ಲಿ ಕಲಾಪ ನಡೆಸಲು ಬಿಡದೇ ಬಿಜೆಪಿ ಪ್ರಜಾಪ್ರಭುತ್ವವನ್ನು ಅಣಕಿಸಿತ್ತು. ಈಗಲೂ ವಿಧಾನ ಪರಿಷತ್ನಲ್ಲಿ ಗದ್ದಲ ಎಬ್ಬಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಿಜೆಪಿ ಅವಮಾನ ಮಾಡಿದೆ ಎಂದು ದೂರಿದರು.

ಪರಿಷತ್ತಿನ ಕಲಾಪದಲ್ಲಿ ಈ ರೀತಿಯ ಅಹಿತಕರ ಘಟನೆ ನಡೆಯಬಾರದಿತ್ತು. ಸದನಕ್ಕೆ ಅಗೌರವ ಸೂಚಿಸಿದ ಇಂತಹ ಘಟನೆ ಯಾವತ್ತು ಆಗಿರಲಿಲ್ಲ. ಉಪ ಸಭಾಪತಿಯವರು ಸಭಾಪತಿ ಸೂಚನೆ ಬಳಿಕ ಪೀಠದಲ್ಲಿ ಕೂರಬೇಕು. ಆದರೆ, ಅವರ ಸೂಚನೆ ಇಲ್ಲದೆಯೆ ಸಭಾಪತಿ ಪೀಠದಲ್ಲಿ ಕೂತಿದ್ದು ತಪ್ಪು ಎಂದು ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm