ಬ್ರೇಕಿಂಗ್ ನ್ಯೂಸ್
25-01-25 11:00 pm Bangalore Correspondent ಕರ್ನಾಟಕ
ಬೆಂಗಳೂರು, ಜ.25: ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮವಾಗಿ ಸೈಟ್ ಹಂಚಿಕೆ ಮಾಡಿದ ಆರೋಪ ಸಂಬಂಧಿಸಿ ಮುಡಾದ ಮಾಜಿ ಆಯುಕ್ತ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ ನೀಡಿದೆ. 75225 ಚದರ ಅಡಿ ಜಾಗವನ್ನು ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮವಾಗಿ ನೀಡಿದ ಆರೋಪ ಕೇಳಿಬಂದಿದ್ದು, ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ಅಕ್ರಮ ಎಸಗಿರುವ ಆರೋಪ ಇದಾಗಿದೆ.
ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ, ನಿವೃತ್ತ ಶಿಕ್ಷಕ ಶಾಂತಪ್ಪ ಅವರಿಂದ ದೂರು ಸಲ್ಲಿಕೆಯಾಗಿತ್ತು. ಈ ಬಗ್ಗೆ ಕ್ರಮ ಕೈಗೊಂಡಿರುವ ಸರ್ಕಾರ, ಮೂರು ದಿನದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸುವಂತೆ ಸೂಚನೆ ನೀಡಿದೆ. ಮುಡಾ 50:50 ಹಗರಣದಲ್ಲಿ ನಿಯಮಬಾಹಿರವಾಗಿ ಸೈಟ್ಹಂಚಿಕೆ ವಿಚಾರದಲ್ಲಿ ಮುಡಾದ ಮಾಜಿ ಆಯುಕ್ತರು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಕೆ.ಲತಾ ಆದೇಶಿಸಿದ್ದಾರೆ. ಈ ಸಂಬಂಧ ಜ.10ರಂದೇ ಮುಡಾದ ಆಯುಕ್ತ ರಘುನಂದನ್ ಅವರಿಗೆ ಕಾರ್ಯದರ್ಶಿಗಳು ಪತ್ರ ಬರೆದಿದ್ದಾರೆ.
ಭೂಮಿ ನೀಡಿದ ಅಂದಿನ ಆಯುಕ್ತರು, ಅಧಿಕಾರಿಗಳು, ನಗರ ಯೋಜನಾ ಕಾರ್ಯದರ್ಶಿ, ಅವರ ಜನ್ಮದಿನಾಂಕ, ವಿಳಾಸ, ನಿವೃತ್ತರಾಗಿದ್ದರೆ ಮನೆ ವಿಳಾಸ ನೀಡಿ ಪ್ರಾಧಿಕಾರದ ಹಿತಾಸಕ್ತಿಗೆ ವಿರುದ್ಧವಾಗಿ ದಿನೇಶ್ ಕುಮಾರ್ ನಡೆದುಕೊಂಡಿದ್ದಾರೆ. ದಿನೇಶ್ ಕುಮಾರ್ ಗಂಭೀರವಾದ ಕರ್ತವ್ಯಲೋಪ ಎಸಗಿದ್ದಾರೆ. ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಜವಾಬ್ದಾರಿಯುತ ಸರ್ಕಾರಿ ನೌಕರನ ರೀತಿ ನಡೆದುಕೊಂಡಿಲ್ಲ. ಕರ್ನಾಟಕ ನಾಗರಿಕ ಸೇವಾ ನಿಯಮಗಳು- 1957ರ ಅಧಿನಿಯಮದ ಅಡಿ ಶಿಸ್ತು ಕ್ರಮ ಜರುಗಿಸಲು ಅನುವಾಗುವಂತೆ ದೋಷಾರೋಪ ಸಲ್ಲಿಸಿ. ಮೂಲ ಅಥವಾ ದೃಢೀಕೃತ ಪ್ರತಿಗಳೊಂದಿಗೆ ಸರ್ಕಾರಕ್ಕೆ ಕಳುಹಿಸಿ ಎಂದು ಕೆ.ಲತಾ ಅವರಿಂದ ಮುಡಾ ಆಯುಕ್ತ ರಘುನಂದನ್ಗೆ ಪತ್ರ ಕಳುಹಿಸಲಾಗಿದೆ.
ಇದೇ ವೇಳೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಸಂಬಂಧ ಲೋಕಾಯುಕ್ತ ತನಿಖಾ ವರದಿ ಕೋರ್ಟಿಗೆ ಸಲ್ಲಿಕೆಯಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಅಕ್ರಮದ ತನಿಖೆ ನಡೆದಿದ್ದು, 3,000ಕ್ಕೂ ಹೆಚ್ಚು ಪುಟಗಳ ವರದಿ ಸಿದ್ಧಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ವರದಿಯಲ್ಲಿ ಕ್ಲೀನ್ಚಿಟ್ ನೀಡಲಾಗಿದೆ.
The government has directed action against former MUD Commissioner and officials for the alleged illegal allotment of a site to the Cathedral Society. There have been allegations of illegal allotment of 75225 square feet of land to the Cathedral Society, and there has been a demand for action against former MUD Commissioner Dinesh Kumar.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm