ಬ್ರೇಕಿಂಗ್ ನ್ಯೂಸ್
27-01-25 06:04 pm Bangalore Correspondent ಕರ್ನಾಟಕ
ಬೆಂಗಳೂರು, ಜ 27: ಇಲ್ಲಿನ ರಾಜಾಜಿನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಕ್ಟ್ರಿಕಲ್ ವಾಹನಗಳ ಶೋ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡು, ಸುಮಾರು 30ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಅಗ್ನಿಗೆ ಆಹುತಿಯಾಗಿದ್ದೆ.
ಡಾ.ರಾಜ್ಕುಮಾರ್ ರಸ್ತೆಯಲ್ಲಿರುವ ಒಕಿನೋವಾ ಎಲೆಕ್ಟ್ರಿಕಲ್ ಬೈಕ್ ಶೂ ರೂಮ್ನಲ್ಲಿ ಇಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷರ್ಣಾಧದಲ್ಲಿ ಅಗ್ನಿ ವ್ಯಾಪ್ತಿಸಿ ಅನಾಹುತ ಸಂಭವಿಸಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬೈಕ್ ಶೂ ರೂಮ್ನಲ್ಲಿ ಎಂದಿನಂತೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಜ್ವಾಲೆ ಹೆಚ್ಚಾಗುತ್ತಿದ್ದಂತೆ ಸಿಬ್ಬಂದಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವಾರವಷ್ಟೇ ಆರ್ಟಿಓ ಅಧಿಕಾರಿಗಳು ಶೋ ರೂಮ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಲವು ಲೋಪದೋಷ ಉಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. 250 ವ್ಯಾಟ್ ಬ್ಯಾಟರಿ ಬಳಕೆಯ 25 ಕಿ.ಮೀ ವೇಗದ ವಾಹನಗಳಿಗೆ ಮಾತ್ರ ಪರವಾನಗಿ ಪಡೆಯಲಾಗಿತ್ತು. ಆದರೆ ಶೋ ರೂಮ್ನಲ್ಲಿ ನಿಗದಿಗಿಂತ ಹೆಚ್ಚು ಸಾಮರ್ಥ್ಯ ಬಳಕೆಯ ಬ್ಯಾಟರಿ ಬಳಸುತ್ತಿರುವುದು ಕಂಡುಬಂದಿತ್ತು. ಈ ಬಗ್ಗೆ ವರದಿಯನ್ನು ಸಿದ್ಧಪಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಟರಿ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದ್ದು, ಅಗ್ನಿ ಆರಿದ ನಂತರ ಪರಿಶೀಲಿಸಿದ ಬಳಿಕ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ನ.19ರಂದು ರಾಜಾಜಿನಗರ ರಸ್ತೆಯಲ್ಲಿ ಮೈ ಇವಿ ಶೋ ರೂಮ್ನಲ್ಲಿಯೂ ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಶೋ ರೂಮ್ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ಸಜೀವ ದಹನವಾಗಿದ್ದಳು. ದುರಂತದಲ್ಲಿ 25ಕ್ಕಿಂತ ಹೆಚ್ಚು ಇವಿ ಬೈಕ್ಗಳು ಬೆಂಕಿಗಾಹುತಿಯಾಗಿದ್ದವು.
A fire broke out at the Okinawa electric bike showroom on Rajkumar Road in Rajajinagar, Bengaluru on Monday. Visuals from the scene showed that most of the electric bikes displayed in the showroom were gutted in the flames and significantly damaged.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm