ಬ್ರೇಕಿಂಗ್ ನ್ಯೂಸ್
29-01-25 11:13 am Bangalore Correspondent ಕರ್ನಾಟಕ
ಬೆಂಗಳೂರು, ಜ.29: ಮೊಬೈಲ್ ಗೀಳು ಅಂಟಿಸಿಕೊಂಡ 13 ವರ್ಷದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.
ಗೊಲ್ಲರಹಟ್ಟಿಯ ನಿವಾಸಿ ಧ್ರುವ(13) ಆತ್ಮಹತ್ಯೆಗೆ ಶರಣಾದ ಬಾಲಕ. ಈತ ತನ್ನ 9 ವರ್ಷದ ತಂಗಿಯ ಮುಂದೆಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು.
ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದು ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಸೊಂಟದ ಉಡದಾರ ಫ್ಯಾನ್ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವು ಇಲ್ಲದೇ ತಂಗಿ ಸುಮ್ಮನಿದ್ದಳು. ಬಾಲಕ ಕೆಳಗೆ ಬಿದ್ದು ಗಾಯಗೊಂಡಿದ್ದು ಅಷ್ಟರಲ್ಲಿ ತಾಯಿ ಮನೆಗೆ ಬಂದಿದ್ದರು. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಬಾಲಕನ ತಂದೆ ಬಸವರಾಜ್ ಬೇಕರಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕ ಅತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಇದೇ ವಿಷಯವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
13 year old boy commits suicide over mobile use in Bangalore. The deceased has been identified as Dhruva. He hang himself while his little sister was in the same room.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm