ಬ್ರೇಕಿಂಗ್ ನ್ಯೂಸ್
29-01-25 09:46 pm Bangalore Correspondent ಕರ್ನಾಟಕ
ಬೆಂಗಳೂರು, ಜ.29: ಬಿಜೆಪಿ ಪಕ್ಷದಲ್ಲಿ ಪ್ರಜಾಪ್ರಭುತ್ವ ಹಾಳಾಗಿ ಹೋಗಿದೆ. ವಿಜಯೇಂದ್ರ ಅವರೇ ಎಲ್ಲವನ್ನೂ ನಿರ್ಧರಿಸುತ್ತಿದ್ದಾರೆ. ಯಡಿಯೂರಪ್ಪ ಅವರಿಗಿಂತಲೂ ಇವರೇ ದೊಡ್ಡವರಾಗಿದ್ದಾರೆ. ಇಷ್ಟು ದಿನ ಸಹಿಸಿಕೊಂಡೆ, ಇನ್ನು ಮುಂದೆ ಇರಕ್ಕಾಗಲ್ಲ. ವಿಜಯೇಂದ್ರ ವಿರುದ್ಧ ಯುದ್ಧ ಸಾರುತ್ತೇನೆ ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಗುಡುಗಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ಯಡಿಯೂರಪ್ಪ ತಮ್ಮ ಮಗನನ್ನು ರಕ್ಷಣೆ ಮಾಡುತ್ತಿದ್ದಾರೆ. ಪಕ್ಷದ ಬಗ್ಗೆ ಗಮನ ಹೊಂದಿಲ್ಲ. ಶೀಘ್ರದಲ್ಲೇ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇನೆ. ಎಲ್ಲವನ್ನೂ ಹೇಳುತ್ತೇನೆ. ದೆಹಲಿಗೆ ಹೋಗಿ ಅಮಿತ್ ಶಾ, ಜೆ.ಪಿ ನಡ್ಡಾ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುತ್ತೇನೆ. ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ, ನಾಯಕರ ಅಸಮಾಧಾನ, ನಾಯಕತ್ವದ ಸಮಸ್ಯೆಗಳನ್ನು ಹೇಳುತ್ತೇನೆ ಎಂದರು.
ಇಷ್ಟು ದಿನ ಸಹಿಸಿಕೊಂಡೆ, ಆದರೆ ಇನ್ನು ಮುಂದೆ ಯುದ್ಧ ಸಾರಲಿದ್ದೇನೆ. ವಿಜಯೇಂದ್ರ ಅವರ ಧೋರಣೆಗೆ ನನ್ನ ತೀವ್ರ ವಿರೋಧ ಇದೆ. ಈಗಲೇ ಇವರ ಅಹಂಕಾರಕ್ಕೆ ಕಡಿವಾಣ ಹಾಕಬೇಕು, ಇಲ್ಲವಾದರೆ ಅವರನ್ನು ಬದಲಾಯಿಸಬೇಕು ಎಂದರು.
ಪಕ್ಷ ಬಿಡುತ್ತೀರಾ ಎಂಬ ಪ್ರಶ್ನೆಗೆ, ರಾಷ್ಟ್ರೀಯ ನಾಯಕರ ಜೊತೆಗೆ ಮಾತಾಡಬೇಕು, ಪಕ್ಷ ಬಿಡುವ ವಿಚಾರವನ್ನು ಈಗಲೇ ನಿರ್ಧರಿಸಲು ಸಾಧ್ಯವಿಲ್ಲ. ರಾಜಕೀಯದಲ್ಲಿ ಯಾವಾಗ ಏನಾಗುತ್ತದೋ ಗೊತ್ತಿಲ್ಲ, ಏನಾದರೂ ಸಂಭವಿಸಬಹುದು ಎನ್ನುವ ಮೂಲಕ ಹೊರಗೆ ಕಾಲಿಡುತ್ತಿರುವ ಸೂಚನೆ ನೀಡಿದರು.
"ವಿಜಯೇಂದ್ರ ಅವರು ಸಣ್ಣ ವಯಸ್ಸಿನಲ್ಲಿ ರಾಜ್ಯಾಧ್ಯಕ್ಷರಾಗಿದ್ದಾರೆ, ಒಂದು ವರ್ಷದಲ್ಲಿ ಅನುಭವ ಪಡೆಯುತ್ತಾರೆ ಎಂದೆನಿಸಿತ್ತು. ಆದರೆ ಬದಲಾವಣೆ ಕಂಡು ಬಂದಿಲ್ಲ. ಪಕ್ಷದಲ್ಲಿ ಪ್ರಜಾಪ್ರಭುತ್ವವಿಲ್ಲ, ನೇಮಕಾತಿಗಳನ್ನು ಏಕಚಕ್ರಾಧಿಪತ್ಯದಂತೆ ಮಾಡಲಾಗುತ್ತಿದೆ. 100% ಶಾಸಕರು ನಮ್ಮ ಬೆಂಬಲದಲ್ಲಿದ್ದಾರೆ, ಆದರೂ ನಾಯಕತ್ವ ತೀರ್ಮಾನಗಳು ಆಂತರಿಕ ಪ್ರಜಾಪ್ರಭುತ್ವದೊಂದಿಗೆ ನಡೆಯುತ್ತಿಲ್ಲ ಎಂದರು. ಈಗಾಗಲೇ ಬಣ ಬಡಿದಾಟದಿಂದ ಕಂಗೆಟ್ಟಿರುವ ಬಿಜೆಪಿಯಲ್ಲಿ ಈಗ ಸುಧಾಕರ್ ಕೂಡ ತೊಡೆ ತಟ್ಟಿರುವುದು ತೀವ್ರ ತಳಮಳ ಸೃಷ್ಟಿಸಿದೆ.
Dr K Sudhakar slams B. Y. Vijayendra says get ready for war. Is Vijayendra greater than Yediyurappa he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm