ಬ್ರೇಕಿಂಗ್ ನ್ಯೂಸ್
31-01-25 02:02 pm HK News Desk ಕರ್ನಾಟಕ
ಮೈಸೂರು, ಜ 31: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು.
2 ಲಕ್ಷ ಹಣ ಕಟ್ಟಿ, ಇಲ್ಲವೇ ಜೈಲು ಶಿಕ್ಷೆ ಅನುಭವಿಸಿ ;
ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಸ್ನೇಹಮಯಿ ಕೃಷ್ಣಗೆ ಇಂದು ಶಿಕ್ಷೆ ಪ್ರಕಟಿಸಿದೆ. 2 ಲಕ್ಷ ಹಣ ಕಟ್ಟಿ, ಇಲ್ಲದಿದ್ದರೆ ಜೈಲು ಶಿಕ್ಷೆ ಅನುಭವಿಸಿ ಎಂದು ಕೋರ್ಟ್ ತೀರ್ಪು ನೀಡಿದೆ.
ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ:
ಇನ್ನು ಚೆಕ್ ಬೌನ್ಸ್ ಕೇಸ್ನಲ್ಲಿ ಕೋರ್ಟ್ ತೀರ್ಪು ನೀಡಿರೋ ಬಗ್ಗೆ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರ್ ನನ್ನ ವಿರುದ್ಧ ಬೇಕು ಅಂತಲೇ ಚೆಕ್ ಬೌನ್ಸ್ ಕೇಸ್ ಹಾಕಿದ್ರು, ಚೆಕ್ ಡೇಟ್ ತಿದ್ದಿ ಬೌನ್ಸ್ ಮಾಡಿದ್ರು ಅಂತ ಆರೋಪಿಸಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿದ್ದೆ, ಈಗ ಕೋರ್ಟ್ ತೀರ್ಪು ನೀಡಿದೆ ಎಂದಿದ್ದಾರೆ. ಚೆಕ್ ಬೌನ್ಸ್ ವಿಚಾರವಾಗಿ ನಾನು ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇನೆ ಅಂತ ಸ್ನೇಹಮಯಿ ಹೇಳಿದ್ದಾರೆ.
ಸ್ನೇಹಮಯಿ ಕೃಷ್ಣ ಮುಡಾ ಪ್ರಕರಣದ ದೂರುದಾರರಾಗಿದ್ದಾರೆ.
Cheque bounce case Snehamahi Krishna gets 6 months imprisonment by mysuru court. The court has ordered to pay 2 laksh or jail term of 6 months. Snehamahi stated that he will challenge the order in the high court.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am