ಬ್ರೇಕಿಂಗ್ ನ್ಯೂಸ್
04-02-25 11:04 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 04: ತೆರಿಗೆ ಪಾವತಿಸದೆ ಓಡಾಡುತ್ತಿದ್ದ ದುಬಾರಿ ಕಾರುಗಳ ಮಾಲೀಕರಿಗೆ ಬಿಸಿ ಮುಟ್ಟಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು 30 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಮಾತ್ರವಲ್ಲದೆ, ವಿವಿಧ ಜಿಲ್ಲೆಗಳಲ್ಲಿ ತೆರಿಗೆ ಪಾವತಿಸದೆ ಸಂಚರಿಸುತ್ತಿದ್ದ ಫೆರಾರಿ, ಪೋರ್ಶೆ, ಬಿಎಂಡಬ್ಲ್ಯೂ, ಬೆಂಜ್ ಹಾಗೂ ರೇಂಜ್ ರೋವರ್ ಕಾರು ಸೇರಿ ವಿವಿಧ ಕಂಪೆನಿಗಳ 30ಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ದಂಡ ಹಾಕಿದ್ದಾರೆ.
ಸಾರಿಗೆ ಉಪ ಆಯುಕ್ತ ಸಿ.ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಆರ್ಟಿಒ ಅಧಿಕಾರಿಗಳಾದ ಬಿ.ಶ್ರೀನಿವಾಸ್ ಪ್ರಸಾದ್, ದೀಪಕ್, ಶ್ರೀನಿವಾಸಪ್ಪ ಮತ್ತು ರಂಜಿತ್ ಸೇರಿದಂತೆ 41 ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ವಶಪಡಿಸಿಕೊಂಡಿರುವ ಕಾರುಗಳಿಂದ ಸುಮಾರು 3 ಕೋಟಿ ರೂ. ತೆರಿಗೆ ವಸೂಲಿಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಫೆರಾರಿ ಕಾರಿನ ಮಾಲೀಕರಿಂದ 1.45 ಕೋಟಿ ರೂ ದಂಡ ವಸೂಲಿ:
ಕಾರ್ಯಾಚರಣೆಯಲ್ಲಿ ತೆರಿಗೆ ಪಾವತಿಸದೆ ವಂಚಿಸಿದ್ದ ಪೆರಾರಿ ಮಾಲೀಕರಿಗೆ 1.45 ಕೋಟಿ ದಂಡ ವಿಧಿಸಲಾಗಿದೆ. ದುಬಾರಿ ಮೌಲ್ಯದ ಕಾರು ಮಹಾರಾಷ್ಟ್ರದಲ್ಲಿ 2023ರಲ್ಲಿ ನೋಂದಣಿಯಾಗಿರುವುದು ಕಂಡುಬಂದಿದ್ದು, ಮಾಲೀಕರು ತೆರಿಗೆ ಕಟ್ಟದೆ ಅನಧಿಕೃತವಾಗಿ ರಾಜ್ಯದಲ್ಲಿ ಸಂಚಾರ ನಡೆಸುತ್ತಿರುವುದು ಆರ್ಟಿಒ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಈ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
In a major crackdown on tax evasion, the Karnataka Transport Department launched a special drive to identify luxury car owners who haven’t paid road taxes. During a single-day operation recently, officials seized 30 high-end cars and recovered approximately ₹3 crore in unpaid taxes.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm