ಬ್ರೇಕಿಂಗ್ ನ್ಯೂಸ್
05-02-25 12:29 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.5: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಒಂದೇ ದಿನದ ಅಂತರದಲ್ಲಿ 6 ಜನ ಬಲಿಯಾಗಿದ್ದು, ಬೆಳಗಾವಿ, ಹಾವೇರಿ, ಹಾಸನ, ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಸೇರಿದಂತೆ ಒಟ್ಟು 6 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಅಡವಿ ಆಂಜನೇಯ ಬಡಾವಣೆಯಲ್ಲಿ ಮಾಲತೇಶ್ (42) ಎಂಬವರು ಮೈಕ್ರೋ ಫೈನಾನ್ಸ್ ಕಿರುಕುಳದಿಂದ ನೊಂದು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸನ ಜಿಲ್ಲೆಯ ಅರಕಲಗೂಡ ತಾಲೂಕಿನ ಕಂಟೇನಹಳ್ಳಿಯಲ್ಲಿ ರೈತ ರವಿ (50) ಎಂಬವರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ವಿವಿಧ ಸಹಕಾರಿ ಸಂಘ, ಮೈಕ್ರೋ ಫೈನಾನ್ಸ್ ಗಳಿಂದ 9 ಲಕ್ಷ ಸಾಲ ಮಾಡಿದ್ದರು. ಜೊತೆಗೆ ಶುಂಠಿ ಬೆಲೆ ಕುಸಿತ ಕಂಡಿದ್ದು, ಇದರಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಚ್.ನಾಗಸಂದ್ರ ಗ್ರಾಮದಲ್ಲಿ ಎನ್.ಆರ್ ನರಸಿಂಹಯ್ಯ (58) ಎಂಬವರು ನೇಣಿಗೆ ಶರಣಾಗಿದ್ದಾರೆ. ಆಟೋ ಚಾಲಕರಾಗಿದ್ದ ಇವರು ಧರ್ಮಸ್ಥಳ ಸಂಘ, ಆಶೀರ್ವಾದ, ಗ್ರಾಮೀಣ ಸಂಘ, ಎಲ್ ಅಂಡ್ ಟಿ, ಸ್ಪಂದನ, ಸಮಸ್ತ, ನವ ಚೈತನ್ಯ ಫೈನಾನ್ಸ್ ಕಂಪನಿಗಳಲ್ಲಿ ಒಟ್ಟು 3.5 ಲಕ್ಷ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ. ಸಾಲ ಕಟ್ಟಲು ಹಣವಿಲ್ಲದ ಕಾರಣ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಗಿರೀಶ್ (26) ಎಂಬ ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರೀಶ್ ವಿವಿಧ ಮೈಕ್ರೋ ಫೈನಾನ್ಸ್ ಗಳಿಂದ 4 ಲಕ್ಷ ರೂ. ಸಾಲ ಮಾಡಿದ್ದರು. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಶಿವನಪ್ಪ ಧರ್ಮಟ್ಟಿ(66) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕ್ಯಾನ್ಸರ್ ಪೀಡಿತ ಪತ್ನಿ ಚಿಕಿತ್ಸೆಗಾಗಿ ವಿವಿಧ ಫೈನಾನ್ಸ್ ಕಂಪನಿಗಳಿಂದ 10 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಆದ್ರೆ, ಆ ಸಾಲವನ್ನು ಮರು ಪಾವತಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಲಾರಂಭಿಸಿದ್ದರು. ಇದರಿಂದ ಬೇಸತ್ತು ಶಿವನಪ್ಪ ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
Harassment By Microfinance Companies In Karnataka total 6 commit suicide in a span of few days gap. Meanwhile, Karnataka Deputy Chief Minister D K Shivakumar on Monday said that the government had planned an ordinance to stop the 'torture' of the poor by microfinance companies in the name of 'loan recovery'.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm