ಬ್ರೇಕಿಂಗ್ ನ್ಯೂಸ್
07-02-25 04:22 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.7: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ನೂತನ ಮಸೂದೆ ಕುರಿತ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ಹೇಳಿಕೊಂಡಿದ್ದು ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆದಂತಾಗಿದೆ.
ಪ್ರಸ್ತಾವಿತ ಮಸೂದೆಯಲ್ಲಿ ಹಲವು ಲೋಪ ದೋಷಗಳನ್ನ ಗುರುತಿಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚೆ ಮಾಡಿ ರಾಜಭವನಕ್ಕೆ ಕಳುಹಿಸಿ ಎಂದು ರಾಜ್ಯಪಾಲರು ಸೂಚಿಸಿದ್ದಾರೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ಸರ್ಕಾರ, ಪರಿಷ್ಕರಣೆ ಮಾಡಿ ಮಸೂದೆ ಜಾರಿಗೆ ತರಬೇಕಿದೆ.
ಮೊದಲು ಮಸೂದೆಯ ಕೆಲವು ದೋಷಗಳನ್ನು ಗುರುತಿಸಿ ಸರಿಪಡಿಸುವಂತೆ ಸ್ಪಷ್ಟೀಕರಣಕ್ಕಾಗಿ ರಾಜ್ಯಪಾಲರು ಸರ್ಕಾರಕ್ಕೆ ಕಳುಹಿಸಿದ್ದರು. ಆಬಳಿಕ ಮತ್ತೊಮ್ಮೆ ಸುಗ್ರೀವಾಜ್ಞೆ ಕಳುಹಿಸಿದ್ದ ಸರ್ಕಾರ ಮುಖ್ಯ ಕಾರ್ಯದರ್ಶಿ ಮತ್ತು ಸಿಎಂ ಕಾರ್ಯದರ್ಶಿ ರಾಜ್ಯಪಾಲರನ್ನ ಭೇಟಿ ಮಾಡಿ ವಿವರಣೆಯನ್ನೂ ನೀಡಿದ್ದರು. ಇದೀಗ ಆರ್ಬಿಐ ನಿಯಮಾವಳಿಗೆ ಅಡ್ಡಿ, ಸಾಲ ಕೊಟ್ಟವರ ರಕ್ಷಣೆ ಬಗ್ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಮಸೂದೆಯಲ್ಲಿ ಸಾಲ ಪಡೆದವರಿಗೆ ರಕ್ಷಣೆ ಇದೆ. ಆದ್ರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಇಲ್ಲ. ಅಲ್ಲದೇ ಆರ್ಬಿಐ ನಿಯಮಗಳು, ಪೊಲೀಸ್ ನಿಯಮಗಳಲ್ಲಿ ವ್ಯತಿರಿಕ್ತ ಪರಿಣಾಮಗಳಿವೆ. ಸಾಲ ಪಡೆದವರಿಗೆ ರಕ್ಷಣೆ ಇರುವಂತೆ, ಸಾಲ ಕೊಡುವವರಿಗೂ ರಕ್ಷಣೆ ಇರಬೇಕಾಗಿದೆ. ವಿಧಾನ ಮಂಡಲ ಅಧಿವೇಶನ ಹತ್ತಿರದಲ್ಲೇ ಇದೆ. ಅಲ್ಲಿಯೇ ಮಸೂದೆ ಮಂಡನೆ ಮಾಡಿ, ಚರ್ಚೆ ಬಳಿಕ ಅಂಗೀಕಾರ ಮಾಡಬಹುದು ಎಂದು ರಾಜ್ಯಪಾಲರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ ಹೇಗೆ ಹಾಕುತ್ತೀರಾ? ಸಾಲ ಪಡೆಯುವವನ ಬಳಿ ಏನೂ ದಾಖಲೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದೀರಿ. ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ಮೇಲೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ 10 ವರ್ಷ ವಿಧಿಸಲಾಗಿದ್ದು, ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಸೂಕ್ತ ರೀತಿಯಲ್ಲಿ ಸಾಲ ಕೊಟ್ಟವರಿಗೂ, ಸಾಲ ಮರುಪಾವತಿ ಮಾಡುವವರಿಗೂ ಇಲ್ಲಿ ಸಮಸ್ಯೆ ಆಗಲಿದೆ. ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ ಕೈಗೊಳ್ತಿಲ್ಲ. ಪೊಲೀಸರು ಸರಿಯಾದ ಕ್ರಮ ಕೈಗೊಳ್ಳದೇ ಇರೋದಕ್ಕೆ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಎಂದು ಆಕ್ಷೇಪ ಎತ್ತಿದ್ದಾರೆ.
Governor Thaawarchand Gehlot on Friday rejected Karnataka Micro Finance (Prevention of Coercive Actions) Ordinance 2025 that the Siddaramaiah-led Congress government had proposed to regulate microfinance.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm