ಬ್ರೇಕಿಂಗ್ ನ್ಯೂಸ್
16-12-20 02:51 pm Headline Karnataka News Network ಕರ್ನಾಟಕ
ಕಾಸರಗೋಡು, ಡಿ.16: ಕೇರಳ ರಾಜ್ಯಾದ್ಯಂತ ಸ್ಥಳೀಯಾಡಳಿತಕ್ಕೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಮಧ್ಯಾಹ್ನ ವರೆಗಿನ ಫಲಿತಾಂಶದಲ್ಲಿ ಕಾಸರಗೋಡು ನಗರಸಭೆಯಲ್ಲಿ ಯುಡಿಎಫ್ ಮತ್ತೆ ಅಧಿಕಾರ ಹಿಡಿದಿದೆ. ಯುಡಿಎಫ್ 21, ಬಿಜೆಪಿ 14 ಹಾಗೂ ಎಲ್ ಡಿಎಫ್ ಒಂದು ಸ್ಥಾನಗಳನ್ನು ಪಡೆದಿದೆ. ಪಕ್ಷೇತರರು ಎರಡು ಸ್ಥಾನ ಗಳಿಸಿದ್ದಾರೆ.
ವರ್ಕಾಡಿ ಬಿಜೆಪಿ 5, ಎಲ್ ಡಿಎಫ್ 6
ಇನ್ನು ವರ್ಕಾಡಿ ಪಂಚಾಯತ್ ನಲ್ಲಿ ಎಲ್ ಡಿಎಪ್ – 6, ಯುಡಿಎಫ್ – 4, ಬಿಜೆಪಿ 5 ಸ್ಥಾನಗಳನ್ನು ಪಡೆದಿದೆ. ಎಸ್ ಡಿಪಿಐ ಒಂದು ಸ್ಥಾನವನ್ನು ಪಡೆದಿದೆ. ಬಿಜೆಪಿ ವರ್ಕಾಡಿ ಪಂಚಾಯತ್ ನಲ್ಲಿ ಇದೇ ಮೊದಲಿಗೆ ಐದು ಸ್ಥಾನಗಳನ್ನು ಗಳಿಸಿದೆ. ಯಾವುದೇ ಪಕ್ಷ ಅಧಿಕಾರ ಪಡೆಯಲು ಬಿಜೆಪಿ ನಿರ್ಣಾಯಕ ಎನಿಸಿದೆ. ಕೊಣಿಬೈಲು ವಾರ್ಡಿನಲ್ಲಿ ಮಮತಾ, ವರ್ಕಾಡಿ ಗೀತಾ ಭಾಸ್ಕರ್, ಕೊಡ್ಲಮೊಗರಿನಲ್ಲಿ ಆಶಾ, ಬೊಡ್ಡೋಡಿ ಪದ್ಮಾವತಿ ಹಾಗೂ ಅರಿಬೈಲು ವಾರ್ಡಿನಲ್ಲಿ ರಾಜ್ ಕುಮಾರ್ ಶೆಟ್ಟಿ ಗೆಲುವು ಕಂಡಿದ್ದಾರೆ. ಅರಿಬೈಲು ವಾರ್ಡಿನಲ್ಲಿ ನಿಕಟ ಪೈಪೋಟಿಯಿದ್ದು ಬಿಜೆಪಿ ಅಭ್ಯರ್ಥಿ 33 ಮತಗಳಿಂದ ಗೆದ್ದಿದ್ದಾರೆ. ರಾಜ್ ಕುಮಾರ್ 457, ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಪುರುಷೋತ್ತಮ 424, ಕಾಂಗ್ರೆಸ್ ಅಭ್ಯರ್ಥಿ ಶರೀಫ್ 338 ಮತಗಳನ್ನು ಪಡೆದಿದ್ದಾರೆ.


ಮೀಂಜದಲ್ಲಿ ಆರು ಬಿಜೆಪಿ, ಎಲ್ ಡಿಎಫ್ 4
ಮೀಂಜ ಪಂಚಾಯತಿನಲ್ಲಿ ಬಿಜೆಪಿ 6, ಎಲ್ ಡಿಎಫ್ 4, ಯುಡಿಎಫ್ 3 ಸ್ಥಾನಗಳನ್ನು ಗೆದ್ದುಕೊಂಡಿದೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಾರೆ. ಮೀಂಜದಲ್ಲೂ ದೊಡ್ಡ ಪಕ್ಷವಾಗಿ ಮೂಡಿಬಂದಿರುವ ಬಿಜೆಪಿಗೆ ಅಧಿಕಾರ ಪಡೆಯಲು ಎಲ್ ಡಿಎಫ್ ಅಥವಾ ಯುಡಿಎಫ್ ನೆರವು ಪಡೆಯಬೇಕಿದೆ.

ಮಂಜೇಶ್ವರ ಪಂಚಾಯತ್ ನಲ್ಲಿ ಯುಡಿಎಫ್ ಎಂಟು ಸ್ಥಾನಗಳನ್ನು ಪಡೆದಿದ್ದರೆ, ಬಿಜೆಪಿ 6 ಸ್ಥಾನಗಳನ್ನು ಗೆದ್ದಿದೆ. ಎಲ್ ಡಿಎಫ್ 3, ಎಸ್ ಡಿಪಿಐ 2, ಐಎನ್ ಡಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಅಶ್ವಿನಿ ಪಜ್ವ ಗೆಲುವು ಕಂಡಿದ್ದಾರೆಂದು ಮೂಲಗಳು ತಿಳಿಸಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm