ಬ್ರೇಕಿಂಗ್ ನ್ಯೂಸ್
09-02-25 07:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.9: ಖಾಸಗಿ ಬಸ್ಸೊಂದು ಚಲಿಸುತ್ತಿದ್ದಾಗಲೇ ಟೈರ್ ಸ್ಫೋಟಗೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭಾನುವಾರ ನಸುಕಿನಲ್ಲಿ ನಡೆದಿದೆ.
ಮಂಡ್ಯದ ಸ್ಯಾಂಜೋ ಆಸ್ಪತ್ರೆ ಸಮೀಪ ಘಟನೆ ನಡೆದಿದ್ದು, ಬಸ್ಸಿನಲ್ಲಿದ್ದ 18 ಮಂದಿ ಪ್ರಯಾಣಿಕರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಅಶೋಕ್ ಅಂಡ್ ಲಾಜಿಸ್ಟಿಕ್ ಟ್ರಾವೆಲ್ಸ್ಗೆ ಸೇರಿದ KA01 AL 5736 ಸಂಖ್ಯೆಯ ಬಸ್ ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ತೆರಳುತ್ತಿದ್ದ ವೇಳೆ ಟೈರ್ ಬ್ಲಾಸ್ಟ್ ಆಗಿ ದುರಂತ ಸಂಭವಿಸಿದೆ.
ಟೈರ್ ಬ್ಲಾಸ್ಟ್ ಆಗ್ತಿದ್ದಂತೆ ಬಸ್ಸಿನ ವೇಗದಿಂದಾಗಿ ರಸ್ತೆ ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತ ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ್ದು ಧಗ ಧಗನೆ ಹೊತ್ತಿ ಉರಿದಿದೆ.
ವಿಚಾರ ತಿಳಿಯುತ್ತಿದ್ದಂತೆ ಮಂಡ್ಯ ಅಗ್ನಿಶಾಮಕ ದಳದ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಡಿಎಸ್ಪಿ ರಾಘವೇಂದ್ರ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು. ಅಗ್ನಿಶಾಮಕ ತಂಡ ಬೆಂಕಿ ನಂದಿಸುವಷ್ಟರಲ್ಲಿ ಬಸ್ ಬಹುತೇಕ ಸುಟ್ಟು ಕರಕಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಳಿಕ ಟ್ರಾವೆಲ್ಸ್ ಸಂಸ್ಥೆ ಕೇರಳದತ್ತ ತೆರಳುತ್ತಿದ್ದ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದೆ. ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
A private bus caught fire reportedly after a tire burst while traveling on the Bengaluru-Mysuru Expressway on Sunday. Fortunately, all passengers escaped unhurt. The incident occurred near Sanjo Hospital in Mandya.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm