ಬ್ರೇಕಿಂಗ್ ನ್ಯೂಸ್
10-02-25 07:01 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.10: ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸತ್ತನೆಂದು ಊರಿಗೆ ಕರೆತರುತ್ತಿದ್ದಾಗಲೇ ಬದುಕಿ ಪವಾಡಕ್ಕೆ ಕಾರಣವಾದ ಘಟನೆ ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ನಡೆದಿದೆ.
ಬಂಕಾಪುರದ ಮಂಜುನಾಥ ನಗರದ ನಿವಾಸಿ ಬಿಷ್ಣಪ್ಪ ಅಶೋಕ ಗುಡಿಮನಿ ಅಲಿಯಾಸ್ ಮಾಸ್ತರ್ (45) ಸತ್ತು ಬದುಕಿದ ವ್ಯಕ್ತಿ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ದಿನ ಉಸಿರು ಇಲ್ಲವೆಂದು ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದರಿಂದ ಪತ್ನಿ ಮತ್ತು ಸಂಬಂಧಿಕರು ಗೋಳಾಡುತ್ತ ಆಂಬ್ಯುಲೆನ್ಸ್ನಲ್ಲಿ ತಮ್ಮ ಊರು ಬಂಕಾಪುರಕ್ಕೆ ಕರೆದೊಯ್ಯುತ್ತಿದ್ದರು.
ಬಂಕಾಪುರ ಹತ್ತಿರ ಬರುತ್ತಿದ್ದಂತೆ ಪತ್ನಿ ಶೀಲಾ, ಅಗೋ ನೊಡು, ಡಾಬಾ ಬಂತು ನೋಡು ಊಟ ಮಾಡುತ್ತೀಯಾ?' ಎಂದು ಜೋರಾಗಿ ಕರೆದು ಗೋಳಾಡಿದ್ದಳು. ಗೋಳಾಡಿ ಕಣ್ಣೀರಿಟ್ಟಾಗಲೇ ಮೃತ ವ್ಯಕ್ತಿ ಉಸಿರಾಡಿದ್ದಾನೆ. ಗಾಬರಿಗೊಂಡ ಸಂಬಂಧಿಕರು ರೋಗಿಯನ್ನು ನೇರವಾಗಿ ಶಿಗ್ಗಾವಿ ಆಸ್ಪತ್ರೆಗೆ
ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ತಪಾಸಣೆ ಮಾಡಿದಾಗ ವ್ಯಕ್ತಿ ಬದುಕಿರೋದು ದೃಢಪಟ್ಟಿದೆ. ಬಳಿಕ ಪ್ರಾಥಮಿಕ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿಕೊಟ್ಟಿದ್ದಾರೆ.
ಅದೇ ಆಂಬುಲೆನ್ಸ್ ವಾಹನದಲ್ಲಿ ರೋಗಿಯನ್ನು ಮರಳಿ ಕರೆತಂದು ಹುಬ್ಬಳ್ಳಿ ಕಿಮ್ಸ್ನಲ್ಲಿ ದಾಖಲಿಸಲಾಗಿದೆ. ಸದ್ಯ ತುರ್ತು ಚಿಕಿತ್ಸಾ ಘಟಕದಲ್ಲಿ ಬಿಷ್ಣಪ್ಪಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅಶೋಕ ಗುಡಿಮನಿ ಮಾಸ್ತರ್ ಸತ್ತಿದ್ದಾರೆಂದು ತಿಳಿದ ಬಂಕಾಪುರದ ಜನರು ಅಷ್ಟರಲ್ಲೇ ಬ್ಯಾನರ್ ಗಳನ್ನು ಹಾಕಿದ್ದರು. ಅಲ್ಲದೆ, ಮೃತನ ಅಂತ್ಯಕ್ರಿಯೆಗೂ ಕುಟುಂಬಸ್ಥರು ಸಿದ್ಧತೆ ಮಾಡಿಕೊಂಡಿದ್ದರು.
ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿಯೂ ಸತ್ತ ಸುದ್ದಿ ಪ್ರಚಾರವಾಗಿತ್ತು. ಬಂಕಾಪುರ ಪಟ್ಟಣದಲ್ಲಿ ನೇತಾಡಿದ್ದ ಬ್ಯಾನರ್ಗಳು ಅಶೋಕ ಸಾವಿನ ಸುದ್ದಿಯನ್ನು ಅಣಕಿಸಿವೆ.
Hubballi dead man gets back to like in ambulance after his family shanted to look his favourite dabba.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm