ಬ್ರೇಕಿಂಗ್ ನ್ಯೂಸ್
13-02-25 05:05 pm HK News Desk ಕರ್ನಾಟಕ
ಕಾರವಾರ, ಫೆ.13: ಜನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತ, ಸುಕ್ರಜ್ಜಿ ಎಂದೇ ಹೆಸರಾಗಿದ್ದ ಹಾಲಕ್ಕಿ ಜನಾಂಗದ ಸುಕ್ರಿ ಬೊಮ್ಮ ಗೌಡ(88) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸುಕ್ರಜ್ಜಿ ಫೆ.13ರ ಗುರುವಾರ ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.
ಸುಕ್ರಜ್ಜಿ ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಜನಪದ ಹಾಡುಗಾರ್ತಿಯಾಗಿದ್ದು ಅವರನ್ನು ಜಾನಪದ ಕೋಗಿಲೆ ಎಂದೇ ಕರೆಯುತ್ತಿದ್ದರು.
ಸುಕ್ರಿ ಬಾಲ್ಯದಲ್ಲಿ ತನ್ನ ತಾಯಿ ಬಳಿಯಿಂದ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡುಗಳು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಹಾಡುಗಳನ್ನು ಸಂರಕ್ಷಿಸಿ ಬಾಯ್ದೆರೆಯಾಗಿ ಹಾಡುತ್ತ ಅವುಗಳನ್ನು ಸಂಗ್ರಹಿಸಿದ್ದರು. ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಸುಕ್ರಜ್ಜಿ ಮುಂಚೂಣಿಯಲ್ಲಿದ್ದರು.
ಇವರಲ್ಲಿರುವ ಅದ್ಭುತ ಹಾಡುಗಾರಿಕೆ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ, 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.
Renowned folk singer and Padma Shri awardee Sukri Bommagowda, fondly known as Sukrajji, passed away Thursday morning at her home in the Badageri village of Karnataka’s Uttara Kannada district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm