ಬ್ರೇಕಿಂಗ್ ನ್ಯೂಸ್
14-02-25 08:44 pm HK News Desk ಕರ್ನಾಟಕ
ಮೈಸೂರು, ಫೆ.14: ಕಲ್ಲು ತೂರಾಟ ನಡೆದ ನಾಲ್ಕು ದಿನಗಳ ಬಳಿಕ ಗೃಹ ಸಚಿವ ಪರಮೇಶ್ವರ್ ಉದಯಗಿರಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಯಾಕಾಯಿತು, ಏನಾಯಿತು ಎಂಬುದರ ಬಗ್ಗೆ ಮಾಹಿತಿ ಪಡೆಯಲು ವಿಸಿಟ್ ಮಾಡಿದ್ದೆ. ಪ್ರಾಥಮಿಕ ಹಂತದ ಮಾಹಿತಿ ತಿಳಿದುಕೊಂಡಿದ್ದೇನೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ, ಹೀಗಾಗಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ಯಾರೂ ಕೂಡ ಇಂತಹ ಘಟನೆಗಳಲ್ಲಿ ರಾಜಕೀಯ ಮಾಡಬಾರದು. ಅಂತಹ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ಸಾರ್ವಜನಿಕರು ಇಂತಹ ವೇಳೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದು ಪರಮೇಶ್ವರ್ ಜನರಲ್ಲಿ ಮನವಿ ಮಾಡಿಕೊಂಡರು.
ಪೊಲೀಸ್ ಹಾಗೂ ವಾಹನಗಳ ಮೇಲೆ ಕಲ್ಲು ಹೊಡೆದವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ. ಈಗಾಗಲೇ ಸಿಸಿಟಿವಿ ದೃಶ್ಯ ಆಧರಿಸಿ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಕಾನೂನು ಕೈಗೆ ತೆಗೆದುಕೊಳ್ಳುವವರು ಎಷ್ಟೇ ಬಲಾಢ್ಯರಾಗಿದ್ರೂ ಕ್ರಮ ತೆಗೆದುಕೊಳ್ಳುತ್ತೇವೆ. ಅಂತಹವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು, ಪೊಲೀಸ್ ಇಲಾಖೆಗೆ ಪಕ್ಷ ಮುಖ್ಯ ಅಲ್ಲ. ಸಮಾಜದಲ್ಲಿ ಶಾಂತಿ ಕಾಪಾಡಲಿಕ್ಕೆ ಪೊಲೀಸ್ ನವರು ಇರೋದು. ಕಾನೂನು ರಕ್ಷಣೆಗೆ ಪೊಲೀಸರ ಮೊದಲ ಆದ್ಯತೆ ಇರತ್ತೆ. ಘಟನೆ ಆದ ಬಳಿಕ ಕೆಲವರು ಹೇಳಿಕೆ ನೀಡ್ತಾರೆ. ಅದನ್ನ ಹೇಳಬಾರದು ಎಂದು ಹೇಳಲು ಸಾಧ್ಯವಿಲ್ಲ. ಅಂತಹ ಹೇಳಿಕೆಗಳಿಂದ ಪೊಲೀಸ್ ನವರನ್ನ ಕುಗ್ಗಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಅಂತಹ ಎಲ್ಲ ಟ್ರೈನಿಂಗ್ ಇರುತ್ತೆ. ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಠಾಣೆ ಮೇಲೆ ಕಲ್ಲು ತೂರಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಯಾಕಿಲ್ಲ.. ನಷ್ಟ ಮಾಡಿದವರಿಂದ ನಷ್ಟ ಭರಿಸುತ್ತೀರಾ ಎಂಬ ಪ್ರಶ್ನೆಗೆ, ಉತ್ತರ ಪ್ರದೇಶ ಮಾದರಿಯ ಕ್ರಮ ಕರ್ನಾಟಕಕ್ಕೆ ಸದ್ಯ ಅಗತ್ಯ ಇಲ್ಲ. ಇದರ ಬಗ್ಗೆ ಅನೇಕ ಚರ್ಚೆ ಆಗುತ್ತಿದೆ. ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ತೆಗೆದುಕೊಂಡು ಹೋಗುವ ಕೆಲಸ ಆಗುತ್ತದೆ. ಈಗ ಅಂತಹ ಪರಿಸ್ಥಿತಿ ಇಲ್ಲ. ಮುಂದೆ ಬೇಕಿದ್ರೆ ನೋಡೋಣ. ಜನರು ಪೊಲೀಸರಿಗೆ ಸಹಕಾರ ನೀಡಬೇಕು. ಇದನ್ನ ಹೊರತುಪಡಿಸಿ ನಾವೇ ಕಾನೂನು ಕೈಗೆ ತೆಗೆದುಕೊಳ್ಳೋದು ಬೇಡ ಎಂದರು.
Four days after the stone-pelting incident triggered by a derogatory social media post in Udayagiri, Home Minister G. Parameshwara on Friday visited the police station and held a meeting with senior police officers.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm