ಬ್ರೇಕಿಂಗ್ ನ್ಯೂಸ್
14-02-25 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.14: ಅಥಣಿ ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ನಿಂತಿದ್ದ ಸೈನಿಕನಿಗೆ ಐದಾರು ಪೊಲೀಸರು ಸೇರಿ ಹಲ್ಲೆಗೈದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಘಟನೆ ಖಂಡಿಸಿ ಮಾಜಿ ಸೈನಿಕರು ಸೇರಿ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ವಾಹನದೊಂದಿಗೆ ನಿಂತಿದ್ದ ತನಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ ಸಿಟ್ಟಾದ ಸೈನಿಕ, ತಾನೂ ದೇಶ ಸೇವೆ ಮಾಡೋನು, ಗೌರವ ಕೊಟ್ಟು ಮಾತನಾಡಿ' ಎಂದು ಹೇಳಿದ್ದರು. ಇದರ ಬಗ್ಗೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಬಳಿಕ ಸೈನಿಕನಿಗೆ ನಡುರಸ್ತೆಯಲ್ಲಿಯೇ ಥಳಿಸಿದ್ದಾರೆ. ಘಟನೆ ಬಳಿಕ ಮಾಜಿ ಸೈನಿಕರ ಸಂಘದ ಸದಸ್ಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಪೋಲಿಸರು ಬಹಿರಂಗ ಕ್ಷಮೆ ಯಾಚಿಸಿದ ಬಳಿಕ ಮುತ್ತಿಗೆ ಹಿಂಪಡೆದರು.
ಹಲ್ಲೆಗೊಳಗಾದ ಯೋಧ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ' ಗೌರವದಿಂದ ಮಾತನಾಡಿ ಎಂದು ಹೇಳಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಐದಾರು ಪೊಲೀಸರು ಸೇರಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾರೆ. ಬಳಿಕ ಠಾಣೆಗೆ ಕರೆತಂದು ಅಲ್ಲಿಯೂ ಅವಾಚ್ಯವಾಗಿ ನಿಂದಿಸಿದ್ದಾರೆ. ನಾವು ಸಹ ದೇಶ ಸೇವೆ ಮಾಡುತ್ತೇವೆ. ಆದರೆ ನಮಗೆ ಸ್ಥಳೀಯವಾಗಿ ಈ ತರಹ ಅಗೌರವ ತೋರಿದ್ದು ಬೇಸರ ತಂದಿದೆ' ಎಂದು ಹೇಳಿದರು.
ಮಾಜಿ ಸೈನಿಕ ಗುರಪ್ಪ ಮಗದುಮ್ ಮಾತನಾಡಿ, 'ವೀರ ಮರಣ ಹೊಂದಿದ ಯೋಧರಿಗೆ ಇಡೀ ದೇಶದಲ್ಲಿಯೇ ಸಾಕಷ್ಟು ಗೌರವ ನೀಡುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಪೋಲಿಸರು ಈ ತರಹ ವರ್ತನೆ ಮಾಡಿದ್ದು ಖಂಡನಿಯ. ಇದನ್ನು ಖಂಡಿಸಿ ನಾವು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿದ್ದೆವು, ಆದರೆ ಪೋಲಿಸರು ಬಹಿರಂಗವಾಗಿ ಕ್ಷಮೆ ಕೇಳಿದ್ದಕ್ಕೆ ಮುತ್ತಿಗೆ ಹಿಂಪಡೆದಿದ್ದೇವೆ ಎಂದು ಹೇಳಿದರು.
Army Solider assulted by five police personals in athani in public over minor issue, soldiers gherao police station in Belagavi
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 04:45 pm
HK News Desk
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 04:30 pm
Mangalore Correspondent
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm