ಬ್ರೇಕಿಂಗ್ ನ್ಯೂಸ್
14-02-25 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.14: ಅಥಣಿ ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ನಿಂತಿದ್ದ ಸೈನಿಕನಿಗೆ ಐದಾರು ಪೊಲೀಸರು ಸೇರಿ ಹಲ್ಲೆಗೈದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಘಟನೆ ಖಂಡಿಸಿ ಮಾಜಿ ಸೈನಿಕರು ಸೇರಿ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ವಾಹನದೊಂದಿಗೆ ನಿಂತಿದ್ದ ತನಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ ಸಿಟ್ಟಾದ ಸೈನಿಕ, ತಾನೂ ದೇಶ ಸೇವೆ ಮಾಡೋನು, ಗೌರವ ಕೊಟ್ಟು ಮಾತನಾಡಿ' ಎಂದು ಹೇಳಿದ್ದರು. ಇದರ ಬಗ್ಗೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಬಳಿಕ ಸೈನಿಕನಿಗೆ ನಡುರಸ್ತೆಯಲ್ಲಿಯೇ ಥಳಿಸಿದ್ದಾರೆ. ಘಟನೆ ಬಳಿಕ ಮಾಜಿ ಸೈನಿಕರ ಸಂಘದ ಸದಸ್ಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಪೋಲಿಸರು ಬಹಿರಂಗ ಕ್ಷಮೆ ಯಾಚಿಸಿದ ಬಳಿಕ ಮುತ್ತಿಗೆ ಹಿಂಪಡೆದರು.
ಹಲ್ಲೆಗೊಳಗಾದ ಯೋಧ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ' ಗೌರವದಿಂದ ಮಾತನಾಡಿ ಎಂದು ಹೇಳಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಐದಾರು ಪೊಲೀಸರು ಸೇರಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾರೆ. ಬಳಿಕ ಠಾಣೆಗೆ ಕರೆತಂದು ಅಲ್ಲಿಯೂ ಅವಾಚ್ಯವಾಗಿ ನಿಂದಿಸಿದ್ದಾರೆ. ನಾವು ಸಹ ದೇಶ ಸೇವೆ ಮಾಡುತ್ತೇವೆ. ಆದರೆ ನಮಗೆ ಸ್ಥಳೀಯವಾಗಿ ಈ ತರಹ ಅಗೌರವ ತೋರಿದ್ದು ಬೇಸರ ತಂದಿದೆ' ಎಂದು ಹೇಳಿದರು.
ಮಾಜಿ ಸೈನಿಕ ಗುರಪ್ಪ ಮಗದುಮ್ ಮಾತನಾಡಿ, 'ವೀರ ಮರಣ ಹೊಂದಿದ ಯೋಧರಿಗೆ ಇಡೀ ದೇಶದಲ್ಲಿಯೇ ಸಾಕಷ್ಟು ಗೌರವ ನೀಡುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಪೋಲಿಸರು ಈ ತರಹ ವರ್ತನೆ ಮಾಡಿದ್ದು ಖಂಡನಿಯ. ಇದನ್ನು ಖಂಡಿಸಿ ನಾವು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿದ್ದೆವು, ಆದರೆ ಪೋಲಿಸರು ಬಹಿರಂಗವಾಗಿ ಕ್ಷಮೆ ಕೇಳಿದ್ದಕ್ಕೆ ಮುತ್ತಿಗೆ ಹಿಂಪಡೆದಿದ್ದೇವೆ ಎಂದು ಹೇಳಿದರು.
Army Solider assulted by five police personals in athani in public over minor issue, soldiers gherao police station in Belagavi
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm