ಬ್ರೇಕಿಂಗ್ ನ್ಯೂಸ್
14-02-25 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.14: ಅಥಣಿ ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ನಿಂತಿದ್ದ ಸೈನಿಕನಿಗೆ ಐದಾರು ಪೊಲೀಸರು ಸೇರಿ ಹಲ್ಲೆಗೈದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಘಟನೆ ಖಂಡಿಸಿ ಮಾಜಿ ಸೈನಿಕರು ಸೇರಿ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ವಾಹನದೊಂದಿಗೆ ನಿಂತಿದ್ದ ತನಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ ಸಿಟ್ಟಾದ ಸೈನಿಕ, ತಾನೂ ದೇಶ ಸೇವೆ ಮಾಡೋನು, ಗೌರವ ಕೊಟ್ಟು ಮಾತನಾಡಿ' ಎಂದು ಹೇಳಿದ್ದರು. ಇದರ ಬಗ್ಗೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಬಳಿಕ ಸೈನಿಕನಿಗೆ ನಡುರಸ್ತೆಯಲ್ಲಿಯೇ ಥಳಿಸಿದ್ದಾರೆ. ಘಟನೆ ಬಳಿಕ ಮಾಜಿ ಸೈನಿಕರ ಸಂಘದ ಸದಸ್ಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಪೋಲಿಸರು ಬಹಿರಂಗ ಕ್ಷಮೆ ಯಾಚಿಸಿದ ಬಳಿಕ ಮುತ್ತಿಗೆ ಹಿಂಪಡೆದರು.
ಹಲ್ಲೆಗೊಳಗಾದ ಯೋಧ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ' ಗೌರವದಿಂದ ಮಾತನಾಡಿ ಎಂದು ಹೇಳಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಐದಾರು ಪೊಲೀಸರು ಸೇರಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾರೆ. ಬಳಿಕ ಠಾಣೆಗೆ ಕರೆತಂದು ಅಲ್ಲಿಯೂ ಅವಾಚ್ಯವಾಗಿ ನಿಂದಿಸಿದ್ದಾರೆ. ನಾವು ಸಹ ದೇಶ ಸೇವೆ ಮಾಡುತ್ತೇವೆ. ಆದರೆ ನಮಗೆ ಸ್ಥಳೀಯವಾಗಿ ಈ ತರಹ ಅಗೌರವ ತೋರಿದ್ದು ಬೇಸರ ತಂದಿದೆ' ಎಂದು ಹೇಳಿದರು.
ಮಾಜಿ ಸೈನಿಕ ಗುರಪ್ಪ ಮಗದುಮ್ ಮಾತನಾಡಿ, 'ವೀರ ಮರಣ ಹೊಂದಿದ ಯೋಧರಿಗೆ ಇಡೀ ದೇಶದಲ್ಲಿಯೇ ಸಾಕಷ್ಟು ಗೌರವ ನೀಡುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಪೋಲಿಸರು ಈ ತರಹ ವರ್ತನೆ ಮಾಡಿದ್ದು ಖಂಡನಿಯ. ಇದನ್ನು ಖಂಡಿಸಿ ನಾವು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿದ್ದೆವು, ಆದರೆ ಪೋಲಿಸರು ಬಹಿರಂಗವಾಗಿ ಕ್ಷಮೆ ಕೇಳಿದ್ದಕ್ಕೆ ಮುತ್ತಿಗೆ ಹಿಂಪಡೆದಿದ್ದೇವೆ ಎಂದು ಹೇಳಿದರು.
Army Solider assulted by five police personals in athani in public over minor issue, soldiers gherao police station in Belagavi
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm