ಬ್ರೇಕಿಂಗ್ ನ್ಯೂಸ್
15-02-25 12:52 pm HK News Desk ಕರ್ನಾಟಕ
ಬೆಂಗಳೂರು, ಫೆ.15: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಈ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಿದೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ.
ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದಕ್ಕೂ ಮುನ್ನ ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕೋವಿಡ್ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಕ ಎನ್-95 ಮಾಸ್ಕ್ ಹಾಗೂ ಪಿಪಿಇ ಕಿಟ್ ಸೇರಿದಂತೆ ಇತರ ಉಪಕರಣಗಳ ಖರೀದಿಯಲ್ಲಿ 167 ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಠಾಣೆಗೆ ಡಿ.13ರಂದು ದೂರು ದಾಖಲಾಗಿತ್ತು.
The Karnataka government has transferred the probe into the alleged Rs 167 crore COVID-19 scam to the Criminal Investigation Department (CID), nearly two months after an FIR was registered over financial irregularities during the pandemic.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 04:45 pm
HK News Desk
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 04:30 pm
Mangalore Correspondent
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm