ಬ್ರೇಕಿಂಗ್ ನ್ಯೂಸ್
15-02-25 12:52 pm HK News Desk ಕರ್ನಾಟಕ
ಬೆಂಗಳೂರು, ಫೆ.15: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಈ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಿದೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ.
ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದಕ್ಕೂ ಮುನ್ನ ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕೋವಿಡ್ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಕ ಎನ್-95 ಮಾಸ್ಕ್ ಹಾಗೂ ಪಿಪಿಇ ಕಿಟ್ ಸೇರಿದಂತೆ ಇತರ ಉಪಕರಣಗಳ ಖರೀದಿಯಲ್ಲಿ 167 ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಠಾಣೆಗೆ ಡಿ.13ರಂದು ದೂರು ದಾಖಲಾಗಿತ್ತು.
The Karnataka government has transferred the probe into the alleged Rs 167 crore COVID-19 scam to the Criminal Investigation Department (CID), nearly two months after an FIR was registered over financial irregularities during the pandemic.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm