ಬ್ರೇಕಿಂಗ್ ನ್ಯೂಸ್
15-02-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯ 23.63 ಕಿ.ಮೀ ಮಾರ್ಗದಲ್ಲಿ ಆರು ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ಸಿದ್ಧಪಡಿಸಿದ್ದು, ಕೇಂದ್ರ ಸರಕಾರಕ್ಕೆ ಸಲ್ಲಿಸಲು ರೆಡಿಯಾಗಿದೆ. ಈ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಪ್ರಸ್ತಾಪ ಕೇಳಿಬಂದಿತ್ತು. ಪ್ರಸ್ತುತ ಹಾಸನ-ಮಂಗಳೂರು ರೈಲ್ವೇ ಮಾರ್ಗದಲ್ಲಿ ಮಾತ್ರ ಸುರಂಗ ಮಾರ್ಗವಿದೆ.
ಸುರಂಗ ಮಾರ್ಗ ನಿರ್ಮಾಣ ಸಂಬಂಧಿಸಿ ಭಾರತೀಯ ವಿಜ್ಞಾನ ಸಂಸ್ಥೆಯ ವರದಿ ಆಧರಿಸಿ ನೀಡಿದ ವಿಸ್ಕೃತ ವರದಿಗೆ ಕೇಂದ್ರ ಅನುಮೋದನೆ ನೀಡಿತ್ತು. ಇದೀಗ ಹೆದ್ದಾರಿ ಪ್ರಾಧಿಕಾರವು 12.60 ಕಿ.ಮೀ ಉದ್ದದ ಆರು ಸುರಂಗ ಮಾರ್ಗ, 1.5 ಕಿ.ಮೀ ಉದ್ದದ 10 ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಈ ಮಾರ್ಗದಲ್ಲಿ ದ್ವಿಮುಖ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡುವ ಜತೆಗೆ ತುರ್ತು ಸಂದರ್ಭಕ್ಕಾಗಿ 8.58 ಮೀ. ವಿಸ್ತಾರದ ತುರ್ತು ಮಾರ್ಗವೂ ಯೋಜನೆಯಲ್ಲಿದೆ. ಶಿರಾಡಿ ಸುರಂಗ ಮಾರ್ಗದ ಕಾಮಗಾರಿಗೆ ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿ(ಜೆಐಸಿಎ) ಆರ್ಥಿಕ ನೆರವು ಒದಗಿಸಲಿದೆ.
ಸುರಂಗ ಮಾರ್ಗದ ಚಿಂತನೆ ಒಂದೆಡೆಯಾದರೆ ಹಿಂದಿನ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಭೂಕುಸಿತ, ಅನಾಹುತದಿಂದ ಎಚ್ಚೆತ್ತು ಶಿರಾಡಿ ಮಾರ್ಗದ ಹೆದ್ದಾರಿ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ. ಪ್ರತಿ ಮಳೆಗಾಲದಲ್ಲಿ ಭೂಕುಸಿತ, ಸಂಚಾರ ಸ್ಥಗಿತ ಸಮಸ್ಯೆ ಮರುಕಳಿಸುತ್ತಲೇ ಇರುವುದನ್ನು ಮನಗಂಡು ಈಗಾಗಲೇ ಚತುಷ್ಪಥ ರಸ್ತೆ ಹಾಗೂ ಸಕಲೇಶಪುರದಿಂದ ಮಾರನಹಳ್ಳಿ ವರೆಗೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಹಗಲು-ರಾತ್ರಿ ಈ ಕಾಮಗಾರಿ ಮಾಡುವ ಮೂಲಕ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಪೂರ್ಣಗೊಳಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
Mangalore DPR ready for shiradi ghat, 23 kilometer tunnel to be built.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 04:45 pm
HK News Desk
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 04:30 pm
Mangalore Correspondent
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm