ಬ್ರೇಕಿಂಗ್ ನ್ಯೂಸ್
15-02-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯ 23.63 ಕಿ.ಮೀ ಮಾರ್ಗದಲ್ಲಿ ಆರು ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ಸಿದ್ಧಪಡಿಸಿದ್ದು, ಕೇಂದ್ರ ಸರಕಾರಕ್ಕೆ ಸಲ್ಲಿಸಲು ರೆಡಿಯಾಗಿದೆ. ಈ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಪ್ರಸ್ತಾಪ ಕೇಳಿಬಂದಿತ್ತು. ಪ್ರಸ್ತುತ ಹಾಸನ-ಮಂಗಳೂರು ರೈಲ್ವೇ ಮಾರ್ಗದಲ್ಲಿ ಮಾತ್ರ ಸುರಂಗ ಮಾರ್ಗವಿದೆ.
ಸುರಂಗ ಮಾರ್ಗ ನಿರ್ಮಾಣ ಸಂಬಂಧಿಸಿ ಭಾರತೀಯ ವಿಜ್ಞಾನ ಸಂಸ್ಥೆಯ ವರದಿ ಆಧರಿಸಿ ನೀಡಿದ ವಿಸ್ಕೃತ ವರದಿಗೆ ಕೇಂದ್ರ ಅನುಮೋದನೆ ನೀಡಿತ್ತು. ಇದೀಗ ಹೆದ್ದಾರಿ ಪ್ರಾಧಿಕಾರವು 12.60 ಕಿ.ಮೀ ಉದ್ದದ ಆರು ಸುರಂಗ ಮಾರ್ಗ, 1.5 ಕಿ.ಮೀ ಉದ್ದದ 10 ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಈ ಮಾರ್ಗದಲ್ಲಿ ದ್ವಿಮುಖ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡುವ ಜತೆಗೆ ತುರ್ತು ಸಂದರ್ಭಕ್ಕಾಗಿ 8.58 ಮೀ. ವಿಸ್ತಾರದ ತುರ್ತು ಮಾರ್ಗವೂ ಯೋಜನೆಯಲ್ಲಿದೆ. ಶಿರಾಡಿ ಸುರಂಗ ಮಾರ್ಗದ ಕಾಮಗಾರಿಗೆ ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿ(ಜೆಐಸಿಎ) ಆರ್ಥಿಕ ನೆರವು ಒದಗಿಸಲಿದೆ.
ಸುರಂಗ ಮಾರ್ಗದ ಚಿಂತನೆ ಒಂದೆಡೆಯಾದರೆ ಹಿಂದಿನ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಭೂಕುಸಿತ, ಅನಾಹುತದಿಂದ ಎಚ್ಚೆತ್ತು ಶಿರಾಡಿ ಮಾರ್ಗದ ಹೆದ್ದಾರಿ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ. ಪ್ರತಿ ಮಳೆಗಾಲದಲ್ಲಿ ಭೂಕುಸಿತ, ಸಂಚಾರ ಸ್ಥಗಿತ ಸಮಸ್ಯೆ ಮರುಕಳಿಸುತ್ತಲೇ ಇರುವುದನ್ನು ಮನಗಂಡು ಈಗಾಗಲೇ ಚತುಷ್ಪಥ ರಸ್ತೆ ಹಾಗೂ ಸಕಲೇಶಪುರದಿಂದ ಮಾರನಹಳ್ಳಿ ವರೆಗೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಹಗಲು-ರಾತ್ರಿ ಈ ಕಾಮಗಾರಿ ಮಾಡುವ ಮೂಲಕ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಪೂರ್ಣಗೊಳಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
Mangalore DPR ready for shiradi ghat, 23 kilometer tunnel to be built.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm