ಬ್ರೇಕಿಂಗ್ ನ್ಯೂಸ್
17-12-20 10:01 am Dilip: Bangalore Correspondent ಕರ್ನಾಟಕ
ಭಟ್ಕಳ, ಡಿ.17: ಆಧುನಿಕ ಮುರಡೇಶ್ವರದ ನಿರ್ಮಾತೃ, ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ (93) ಇಂದು ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ್ದ ರಾಮ ನಾಗಪ್ಪ ಶೆಟ್ಟಿಯವರು ಮರಡೇಶ್ವರದ ಸಮುದ್ರ ಕಿನಾರೆಯಲ್ಲಿ ದೇವಸ್ಥಾನ ಸ್ಥಾಪಿಸಿ, 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿ ಮತ್ತು ಜಗದ್ವ್ಯಾಪಿ ಪ್ರಸಿದ್ಧಿಗೆ ಕಾರಣರಾಗಿದ್ದರು.
1967 ರಲ್ಲಿ ಆರ್.ಎನ್. ಶೆಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದ ಅವರು, ಕಟ್ಟಡ ನಿರ್ಮಾಣ, ಹೋಟಲ್ ಉದ್ಯಮ, ವೈದ್ಯಕೀಯ ರಂಗ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆಯ ಮೂಲಕ ಬೆಂಗಳೂರು, ಮುಂಬೈ ಸೇರಿದಂತೆ ವಿದೇಶದಲ್ಲೂ ಹೆಸರು ಮಾಡಿದ್ದಾರೆ. ಇವರ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ 2009-10 ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮೂಲಕ ಸಂತಾಪ ತಿಳಿಸಿದ್ದಾರೆ.
ಮೃತರು ಮೂವರು ಪುತ್ರರು, ನಾಲ್ಕು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನ ಉತ್ತರಹಳ್ಳಿಯ ಅವರ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
R N Shetty, who was the founder of RNS group of educational and many other concerns, breathed his last at around 2 am on Thursday December 17. He was 92. Heart attack caused his demise.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm