ಬ್ರೇಕಿಂಗ್ ನ್ಯೂಸ್
20-02-25 10:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯ ಉಂಟು ಮಾಡಿಲ್ಲ. ಮುಖ್ಯಮಂತ್ರಿ ಅಧೀನದಲ್ಲಿ ಇರುವ ಅಧಿಕಾರಿಗಳು ತನಿಖೆ ಮಾಡಿದ ಮೇಲೆ ಇನ್ನೇನು ನಿರೀಕ್ಷೆ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ನಿರೀಕ್ಷೆ ಮಾಡಿದ್ದು ನಿಜವಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಸಂದರ್ಭದಲ್ಲಿ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ರೀತಿ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5,000 ಕೋಟಿಯ ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದಿದ್ದ ಸಿದ್ದರಾಮಯ್ಯ ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದೂ ತಿಳಿಸಿದ್ದರು. ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯನವರು ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ಟೀಕಿಸಿದರು.
ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? ಇವರದೇ ಅಧೀನದ ಲೋಕಾಯುಕ್ತ ಅಧಿಕಾರಿಗಳು ಕ್ಲೀನ್ಚಿಟ್ ಕೊಟ್ಟಿದ್ದಾರೆ. ಒಬ್ಬ ಅಪರಾಧಿ ತಪ್ಪು ಮಾಡಿದ ಮೇಲೆ ಆ ಮಾತನ್ನು ಹಿಂತಿರುಗಿಸಿದರೆ ನಿರಪರಾಧಿ ಆಗುತ್ತಾನೆಯೇ.. ಅದೇ ಮಾದರಿಯಲ್ಲಿ ಕ್ಲೀನ್ಚಿಟ್ ಕೊಡಲಾಗಿದೆ ಎಂದರೆ, ಇದನ್ನು ಮಾಧ್ಯಮ ಸ್ನೇಹಿತರು ಮುಖ್ಯಮಂತ್ರಿಗಳಿಗೆ ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.
Reacting strongly to the clean chit given by Karnataka Lokayukta to Chief Minister Siddaramaiah in connection with the MUDA land scam case, Karnataka unit BJP president B.Y. Vijayendra alleged that the senior Congress leader has obtained a “fake clean chit”.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm