ಬ್ರೇಕಿಂಗ್ ನ್ಯೂಸ್
17-12-20 11:09 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಪಿ.ವಿ. ಲಕ್ಷ್ಮೀ (33) ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಲಕ್ಷ್ಮೀ ಅಲ್ಲಿಯೇ ಕೊಠಡಿ ಒಂದರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 10.30ರ ಹೊತ್ತಿಗೆ ನೇಣು ಬಿಗಿದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಲಕ್ಷ್ಮೀ ಅವರು 2014ರ ಬ್ಯಾಚ್ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ಸಿಐಡಿ ವಿಭಾಗಕ್ಕೆ ಡಿವೈಎಸ್ಪಿ ನೇಮಕವಾಗಿದ್ದರು. ಲಕ್ಷ್ಮೀ ಪ್ರೊಬೇಷನರಿ ಬಳಿಕ ಮೊದಲ ಬಾರಿಗೆ ಸಿಐಡಿಗೆ ಡಿವೈಎಸ್ಪಿ ಆಗಿ ಪೋಸ್ಟಿಂಗ್ ಆಗಿದ್ದರು. ತನಿಖೆ ಮುಂದುವರಿದಿದ್ದು ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ.
ಮಾನಸಿಕವಾಗಿ ಖಿನ್ನರಾಗಿದ್ದರೇ ಮೇಲಧಿಕಾರಿಗಳ ಕಿರುಕುಳ ಇತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೂರು ವರ್ಷಗಳಿಂದ ಒಂದೇ ಕಡೆ ಇದ್ದು ಬೇರೆ ಪೋಸ್ಟಿಂಗ್ ಮಾಡದಿರುವುದು ಚಿಂತೆಗೆ ಕಾರಣ ಆಗಿತ್ತು ಎನ್ನಲಾಗಿದೆ.
ದಂಪತಿ ನಡುವೆ ಹೊಂದಾಣಿಕೆ ಇರಲಿಲ್ಲ..!
ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ಲಕ್ಷ್ಮೀಗೆ ಮಕ್ಕಳಾಗಿರಲಿಲ್ಲ ಎಂಬ ಚಿಂತೆ ಇತ್ತು. ಜೊತೆಗೆ, ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದ ಪತಿಯ ಜೊತೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಸ್ನೇಹಿತೆಯ ಜೊತೆ ಹೇಳಿಕೊಂಡು ಕೊರಗುತ್ತಿದ್ದರು. ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದ ಸ್ನೇಹಿತೆಯ ಮನೆಗೆ ತೆರಳಿ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿದ ಬಳಿಕ ಕೊಠಡಿಗೆ ತೆರಳಿದ ಲಕ್ಷ್ಮೀ ಹೊರಗೆ ಬಾರದೆ ಬಾಗಿಲು ಹಾಕ್ಕೊಂಡಿದ್ದರು. ಬಾಗಿಲು ತೆರೆಯದ್ದರಿಂದ ಸಂಶಯ ಬಂದು ಬಾಗಿಲು ಒಡೆದು ನೋಡಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಲಕ್ಷ್ಮೀ ಮೂಲತಃ ಕೋಲಾರ ಜಿಲ್ಲೆಯ ಮೂಲದವರಾಗಿದ್ದರು.
A lady CID officer in Bengaluru committed suicide on Wednesday night. She has been identified as PV Laxmi. The DSP-rank official was posted in the Criminal Investigation Department here.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm