ಬ್ರೇಕಿಂಗ್ ನ್ಯೂಸ್
17-12-20 11:09 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಪಿ.ವಿ. ಲಕ್ಷ್ಮೀ (33) ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಲಕ್ಷ್ಮೀ ಅಲ್ಲಿಯೇ ಕೊಠಡಿ ಒಂದರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 10.30ರ ಹೊತ್ತಿಗೆ ನೇಣು ಬಿಗಿದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಲಕ್ಷ್ಮೀ ಅವರು 2014ರ ಬ್ಯಾಚ್ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ಸಿಐಡಿ ವಿಭಾಗಕ್ಕೆ ಡಿವೈಎಸ್ಪಿ ನೇಮಕವಾಗಿದ್ದರು. ಲಕ್ಷ್ಮೀ ಪ್ರೊಬೇಷನರಿ ಬಳಿಕ ಮೊದಲ ಬಾರಿಗೆ ಸಿಐಡಿಗೆ ಡಿವೈಎಸ್ಪಿ ಆಗಿ ಪೋಸ್ಟಿಂಗ್ ಆಗಿದ್ದರು. ತನಿಖೆ ಮುಂದುವರಿದಿದ್ದು ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ.
ಮಾನಸಿಕವಾಗಿ ಖಿನ್ನರಾಗಿದ್ದರೇ ಮೇಲಧಿಕಾರಿಗಳ ಕಿರುಕುಳ ಇತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೂರು ವರ್ಷಗಳಿಂದ ಒಂದೇ ಕಡೆ ಇದ್ದು ಬೇರೆ ಪೋಸ್ಟಿಂಗ್ ಮಾಡದಿರುವುದು ಚಿಂತೆಗೆ ಕಾರಣ ಆಗಿತ್ತು ಎನ್ನಲಾಗಿದೆ.
ದಂಪತಿ ನಡುವೆ ಹೊಂದಾಣಿಕೆ ಇರಲಿಲ್ಲ..!
ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ಲಕ್ಷ್ಮೀಗೆ ಮಕ್ಕಳಾಗಿರಲಿಲ್ಲ ಎಂಬ ಚಿಂತೆ ಇತ್ತು. ಜೊತೆಗೆ, ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದ ಪತಿಯ ಜೊತೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಸ್ನೇಹಿತೆಯ ಜೊತೆ ಹೇಳಿಕೊಂಡು ಕೊರಗುತ್ತಿದ್ದರು. ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದ ಸ್ನೇಹಿತೆಯ ಮನೆಗೆ ತೆರಳಿ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿದ ಬಳಿಕ ಕೊಠಡಿಗೆ ತೆರಳಿದ ಲಕ್ಷ್ಮೀ ಹೊರಗೆ ಬಾರದೆ ಬಾಗಿಲು ಹಾಕ್ಕೊಂಡಿದ್ದರು. ಬಾಗಿಲು ತೆರೆಯದ್ದರಿಂದ ಸಂಶಯ ಬಂದು ಬಾಗಿಲು ಒಡೆದು ನೋಡಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಲಕ್ಷ್ಮೀ ಮೂಲತಃ ಕೋಲಾರ ಜಿಲ್ಲೆಯ ಮೂಲದವರಾಗಿದ್ದರು.
A lady CID officer in Bengaluru committed suicide on Wednesday night. She has been identified as PV Laxmi. The DSP-rank official was posted in the Criminal Investigation Department here.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm