ಬ್ರೇಕಿಂಗ್ ನ್ಯೂಸ್
17-12-20 11:09 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಪಿ.ವಿ. ಲಕ್ಷ್ಮೀ (33) ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಲಕ್ಷ್ಮೀ ಅಲ್ಲಿಯೇ ಕೊಠಡಿ ಒಂದರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 10.30ರ ಹೊತ್ತಿಗೆ ನೇಣು ಬಿಗಿದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಲಕ್ಷ್ಮೀ ಅವರು 2014ರ ಬ್ಯಾಚ್ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ಸಿಐಡಿ ವಿಭಾಗಕ್ಕೆ ಡಿವೈಎಸ್ಪಿ ನೇಮಕವಾಗಿದ್ದರು. ಲಕ್ಷ್ಮೀ ಪ್ರೊಬೇಷನರಿ ಬಳಿಕ ಮೊದಲ ಬಾರಿಗೆ ಸಿಐಡಿಗೆ ಡಿವೈಎಸ್ಪಿ ಆಗಿ ಪೋಸ್ಟಿಂಗ್ ಆಗಿದ್ದರು. ತನಿಖೆ ಮುಂದುವರಿದಿದ್ದು ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ.
ಮಾನಸಿಕವಾಗಿ ಖಿನ್ನರಾಗಿದ್ದರೇ ಮೇಲಧಿಕಾರಿಗಳ ಕಿರುಕುಳ ಇತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೂರು ವರ್ಷಗಳಿಂದ ಒಂದೇ ಕಡೆ ಇದ್ದು ಬೇರೆ ಪೋಸ್ಟಿಂಗ್ ಮಾಡದಿರುವುದು ಚಿಂತೆಗೆ ಕಾರಣ ಆಗಿತ್ತು ಎನ್ನಲಾಗಿದೆ.
ದಂಪತಿ ನಡುವೆ ಹೊಂದಾಣಿಕೆ ಇರಲಿಲ್ಲ..!
ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ಲಕ್ಷ್ಮೀಗೆ ಮಕ್ಕಳಾಗಿರಲಿಲ್ಲ ಎಂಬ ಚಿಂತೆ ಇತ್ತು. ಜೊತೆಗೆ, ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದ ಪತಿಯ ಜೊತೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಸ್ನೇಹಿತೆಯ ಜೊತೆ ಹೇಳಿಕೊಂಡು ಕೊರಗುತ್ತಿದ್ದರು. ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದ ಸ್ನೇಹಿತೆಯ ಮನೆಗೆ ತೆರಳಿ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿದ ಬಳಿಕ ಕೊಠಡಿಗೆ ತೆರಳಿದ ಲಕ್ಷ್ಮೀ ಹೊರಗೆ ಬಾರದೆ ಬಾಗಿಲು ಹಾಕ್ಕೊಂಡಿದ್ದರು. ಬಾಗಿಲು ತೆರೆಯದ್ದರಿಂದ ಸಂಶಯ ಬಂದು ಬಾಗಿಲು ಒಡೆದು ನೋಡಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಲಕ್ಷ್ಮೀ ಮೂಲತಃ ಕೋಲಾರ ಜಿಲ್ಲೆಯ ಮೂಲದವರಾಗಿದ್ದರು.
A lady CID officer in Bengaluru committed suicide on Wednesday night. She has been identified as PV Laxmi. The DSP-rank official was posted in the Criminal Investigation Department here.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm