ಬ್ರೇಕಿಂಗ್ ನ್ಯೂಸ್
17-12-20 11:09 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಪಿ.ವಿ. ಲಕ್ಷ್ಮೀ (33) ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಲಕ್ಷ್ಮೀ ಅಲ್ಲಿಯೇ ಕೊಠಡಿ ಒಂದರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 10.30ರ ಹೊತ್ತಿಗೆ ನೇಣು ಬಿಗಿದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಲಕ್ಷ್ಮೀ ಅವರು 2014ರ ಬ್ಯಾಚ್ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ಸಿಐಡಿ ವಿಭಾಗಕ್ಕೆ ಡಿವೈಎಸ್ಪಿ ನೇಮಕವಾಗಿದ್ದರು. ಲಕ್ಷ್ಮೀ ಪ್ರೊಬೇಷನರಿ ಬಳಿಕ ಮೊದಲ ಬಾರಿಗೆ ಸಿಐಡಿಗೆ ಡಿವೈಎಸ್ಪಿ ಆಗಿ ಪೋಸ್ಟಿಂಗ್ ಆಗಿದ್ದರು. ತನಿಖೆ ಮುಂದುವರಿದಿದ್ದು ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ.
ಮಾನಸಿಕವಾಗಿ ಖಿನ್ನರಾಗಿದ್ದರೇ ಮೇಲಧಿಕಾರಿಗಳ ಕಿರುಕುಳ ಇತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೂರು ವರ್ಷಗಳಿಂದ ಒಂದೇ ಕಡೆ ಇದ್ದು ಬೇರೆ ಪೋಸ್ಟಿಂಗ್ ಮಾಡದಿರುವುದು ಚಿಂತೆಗೆ ಕಾರಣ ಆಗಿತ್ತು ಎನ್ನಲಾಗಿದೆ.
ದಂಪತಿ ನಡುವೆ ಹೊಂದಾಣಿಕೆ ಇರಲಿಲ್ಲ..!
ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ಲಕ್ಷ್ಮೀಗೆ ಮಕ್ಕಳಾಗಿರಲಿಲ್ಲ ಎಂಬ ಚಿಂತೆ ಇತ್ತು. ಜೊತೆಗೆ, ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದ ಪತಿಯ ಜೊತೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಸ್ನೇಹಿತೆಯ ಜೊತೆ ಹೇಳಿಕೊಂಡು ಕೊರಗುತ್ತಿದ್ದರು. ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದ ಸ್ನೇಹಿತೆಯ ಮನೆಗೆ ತೆರಳಿ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿದ ಬಳಿಕ ಕೊಠಡಿಗೆ ತೆರಳಿದ ಲಕ್ಷ್ಮೀ ಹೊರಗೆ ಬಾರದೆ ಬಾಗಿಲು ಹಾಕ್ಕೊಂಡಿದ್ದರು. ಬಾಗಿಲು ತೆರೆಯದ್ದರಿಂದ ಸಂಶಯ ಬಂದು ಬಾಗಿಲು ಒಡೆದು ನೋಡಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಲಕ್ಷ್ಮೀ ಮೂಲತಃ ಕೋಲಾರ ಜಿಲ್ಲೆಯ ಮೂಲದವರಾಗಿದ್ದರು.
A lady CID officer in Bengaluru committed suicide on Wednesday night. She has been identified as PV Laxmi. The DSP-rank official was posted in the Criminal Investigation Department here.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm