ಬ್ರೇಕಿಂಗ್ ನ್ಯೂಸ್
21-02-25 10:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ತೆಲಂಗಾಣ, ಆಂಧ್ರಪ್ರದೇಶ ಮಾದರಿಯಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ರಂಜಾನ್ ತಿಂಗಳಲ್ಲಿ ಸಂಜೆ 4 ಗಂಟೆಯ ನಂತರ ಎರಡು ಗಂಟೆ ಬೇಗ ಕರ್ತವ್ಯದಿಂದ ತೆರಳಲು ಅವಕಾಶ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದೆ.
ಕೆಪಿಸಿಸಿ ಉಪಾಧ್ಯಕ್ಷರಾದ ಎಂ.ಆರ್.ಎಂ ಹುಸೇನ್ ಮತ್ತು ಸೈಯದ್ ಅಹ್ಮದ್ ಅವರು ಈ ಕುರಿತು ಮನವಿ ಸಲ್ಲಿಸಿದ್ದಾರೆ. ಇದಲ್ಲದೆ, ಬೇಡಿಕೆ ಈಡೇರಿಸಲು ಒತ್ತಾಯಿಸಿ ಪಕ್ಷದ ಮುಸ್ಲಿಂ ಮುಖಂಡರು ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ ಎಂದವರು ತಿಳಿಸಿದ್ದಾರೆ.
ತೆಲಂಗಾಣ ಸರ್ಕಾರ ಈ ರೀತಿಯ ವಿಶೇಷ ವಿನಾಯ್ತಿ ನೀಡುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರವೂ ಅಂತಹದ್ದೇ ಆದೇಶ ಹೊರಡಿಸಿತ್ತು. ಬಿಜೆಪಿ ತೀವ್ರ ವಿರೋಧ ಮಧ್ಯೆಯೂ ಎರಡು ರಾಜ್ಯಗಳಲ್ಲಿ ವಿವಾದಾತ್ಮಕ ನಡೆಯನ್ನು ಅಲ್ಲಿನ ಸರ್ಕಾರಗಳು ಇಟ್ಟಿವೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಅದೇ ಮಾದರಿಯ ಆದೇಶಕ್ಕಾಗಿ ಕೂಗು ಎದ್ದಿದೆ. ರಾಜ್ಯದ ಬೇಡಿಕೆ ಸಂಬಂಧಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರಿಗೂ ಇಬ್ಬರು ನಾಯಕರು ಪತ್ರ ಬರೆದಿದ್ದಾರೆ.
ಹಿಂದುಗಳೂ ಕೇಳಿದರೆ ಸರ್ಕಾರಿ ಕಚೇರಿ ಖಾಲಿಯಾದೀತು !
ಆದರೆ ಈ ರೀತಿಯ ನಿರ್ಧಾರ ಕೈಗೊಂಡಿದ್ದಕ್ಕೆ ಹಿಂದು ಸಂಘಟನೆಗಳ ನಾಯಕರು ತೀವ್ರ ಆಕ್ಷೇಪ ಎತ್ತಿದ್ದಾರೆ. ಈಗ ಎರಡು ಗಂಟೆ ಕೇಳುತ್ತಾರೆ, ಮುಂದೆ ಶುಕ್ರವಾರ ಇಡೀ ರಜೆ ಕೇಳಬಹುದು. ಎಲ್ಲರಿಗೂ ಒಂದೇ ಎನ್ನುವ ಕಾನೂನು ಇರುವಾಗ ಮುಸ್ಲಿಮರಿಗೆ ವಿಶೇಷ ನ್ಯಾಯ ಕೊಡುವುದು ಸರಿಯಲ್ಲ. ಹಾಗೆ ಮಾಡಿದರೆ ಮುಂದೆ ಹಿಂದುಗಳೂ ಶಿವರಾತ್ರಿ ಜಾಗರಣೆ, ಏಕಾದಶಿ ಜಾಗರಣೆಯೆಂದು ರಜೆ ಕೇಳಲು ಬರಬಹುದು. ಧಾರ್ಮಿಕ ಸ್ವಾತಂತ್ರ್ಯ ಎನ್ನುವುದು ಎಲ್ಲರಿಗೂ ಸಮಾನ ಇದ್ದ ಮೇಲೆ ಒಂದು ಸಮುದಾಯದ ಧಾರ್ಮಿಕ ಹಬ್ಬದ ನೆಪದಲ್ಲಿ ಸರ್ಕಾರಿ ಕರ್ತವ್ಯದಲ್ಲಿ ಎರಡು ಗಂಟೆ ಕಡಿತ ಮಾಡುವುದು ಸರಿಯಲ್ಲ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆ ರೀತಿಯ ಬೇಡಿಕೆ ಬಂದಿದೆ, ಪರಿಶೀಲನೆ ಮಾಡಬೇಕಷ್ಟೆ ಎಂದಿದ್ದಾರೆ.
The Karnataka Pradesh Congress Committee (KPCC) has put forth a demand for a reduction of two working hours for Muslim government employees, proposing a model similar to that of Telangana. This suggestion has ignited discussions about employee rights and community representation within government sectors. Adding to the conversation, Sri Ram Sena leader Pramod Muthalik has criticized the Siddaramaiah-led government, accusing it of unlawfully favoring Muslim leaders in administrative roles
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm