ಬ್ರೇಕಿಂಗ್ ನ್ಯೂಸ್
21-02-25 10:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ತೆಲಂಗಾಣ, ಆಂಧ್ರಪ್ರದೇಶ ಮಾದರಿಯಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ರಂಜಾನ್ ತಿಂಗಳಲ್ಲಿ ಸಂಜೆ 4 ಗಂಟೆಯ ನಂತರ ಎರಡು ಗಂಟೆ ಬೇಗ ಕರ್ತವ್ಯದಿಂದ ತೆರಳಲು ಅವಕಾಶ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದೆ.
ಕೆಪಿಸಿಸಿ ಉಪಾಧ್ಯಕ್ಷರಾದ ಎಂ.ಆರ್.ಎಂ ಹುಸೇನ್ ಮತ್ತು ಸೈಯದ್ ಅಹ್ಮದ್ ಅವರು ಈ ಕುರಿತು ಮನವಿ ಸಲ್ಲಿಸಿದ್ದಾರೆ. ಇದಲ್ಲದೆ, ಬೇಡಿಕೆ ಈಡೇರಿಸಲು ಒತ್ತಾಯಿಸಿ ಪಕ್ಷದ ಮುಸ್ಲಿಂ ಮುಖಂಡರು ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ ಎಂದವರು ತಿಳಿಸಿದ್ದಾರೆ.
ತೆಲಂಗಾಣ ಸರ್ಕಾರ ಈ ರೀತಿಯ ವಿಶೇಷ ವಿನಾಯ್ತಿ ನೀಡುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರವೂ ಅಂತಹದ್ದೇ ಆದೇಶ ಹೊರಡಿಸಿತ್ತು. ಬಿಜೆಪಿ ತೀವ್ರ ವಿರೋಧ ಮಧ್ಯೆಯೂ ಎರಡು ರಾಜ್ಯಗಳಲ್ಲಿ ವಿವಾದಾತ್ಮಕ ನಡೆಯನ್ನು ಅಲ್ಲಿನ ಸರ್ಕಾರಗಳು ಇಟ್ಟಿವೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಅದೇ ಮಾದರಿಯ ಆದೇಶಕ್ಕಾಗಿ ಕೂಗು ಎದ್ದಿದೆ. ರಾಜ್ಯದ ಬೇಡಿಕೆ ಸಂಬಂಧಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರಿಗೂ ಇಬ್ಬರು ನಾಯಕರು ಪತ್ರ ಬರೆದಿದ್ದಾರೆ.
ಹಿಂದುಗಳೂ ಕೇಳಿದರೆ ಸರ್ಕಾರಿ ಕಚೇರಿ ಖಾಲಿಯಾದೀತು !
ಆದರೆ ಈ ರೀತಿಯ ನಿರ್ಧಾರ ಕೈಗೊಂಡಿದ್ದಕ್ಕೆ ಹಿಂದು ಸಂಘಟನೆಗಳ ನಾಯಕರು ತೀವ್ರ ಆಕ್ಷೇಪ ಎತ್ತಿದ್ದಾರೆ. ಈಗ ಎರಡು ಗಂಟೆ ಕೇಳುತ್ತಾರೆ, ಮುಂದೆ ಶುಕ್ರವಾರ ಇಡೀ ರಜೆ ಕೇಳಬಹುದು. ಎಲ್ಲರಿಗೂ ಒಂದೇ ಎನ್ನುವ ಕಾನೂನು ಇರುವಾಗ ಮುಸ್ಲಿಮರಿಗೆ ವಿಶೇಷ ನ್ಯಾಯ ಕೊಡುವುದು ಸರಿಯಲ್ಲ. ಹಾಗೆ ಮಾಡಿದರೆ ಮುಂದೆ ಹಿಂದುಗಳೂ ಶಿವರಾತ್ರಿ ಜಾಗರಣೆ, ಏಕಾದಶಿ ಜಾಗರಣೆಯೆಂದು ರಜೆ ಕೇಳಲು ಬರಬಹುದು. ಧಾರ್ಮಿಕ ಸ್ವಾತಂತ್ರ್ಯ ಎನ್ನುವುದು ಎಲ್ಲರಿಗೂ ಸಮಾನ ಇದ್ದ ಮೇಲೆ ಒಂದು ಸಮುದಾಯದ ಧಾರ್ಮಿಕ ಹಬ್ಬದ ನೆಪದಲ್ಲಿ ಸರ್ಕಾರಿ ಕರ್ತವ್ಯದಲ್ಲಿ ಎರಡು ಗಂಟೆ ಕಡಿತ ಮಾಡುವುದು ಸರಿಯಲ್ಲ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆ ರೀತಿಯ ಬೇಡಿಕೆ ಬಂದಿದೆ, ಪರಿಶೀಲನೆ ಮಾಡಬೇಕಷ್ಟೆ ಎಂದಿದ್ದಾರೆ.
The Karnataka Pradesh Congress Committee (KPCC) has put forth a demand for a reduction of two working hours for Muslim government employees, proposing a model similar to that of Telangana. This suggestion has ignited discussions about employee rights and community representation within government sectors. Adding to the conversation, Sri Ram Sena leader Pramod Muthalik has criticized the Siddaramaiah-led government, accusing it of unlawfully favoring Muslim leaders in administrative roles
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm