ಬ್ರೇಕಿಂಗ್ ನ್ಯೂಸ್
24-02-25 01:36 pm HK News Desk ಕರ್ನಾಟಕ
ಜಬಲ್ಪುರ/ಬೆಳಗಾವಿ, ಫೆ 24: ಮಧ್ಯಪ್ರದೇಶದ ಜಬಲ್ಪುರದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಯಾಗರಾಜ್ ಮಹಾಕುಂಭ ಮೇಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕುಂಭಮೇಳದಲ್ಲಿ ಭಾಗಿಯಾಗಿ ವಾಪಸ್ ಊರಿಗೆ ಮರಳುತ್ತಿದ್ದರು. ಈ ವೇಳೆ ಮಧ್ಯಪ್ರದೇಶದ ಜಬಲ್ಪುರದ ಸಿಹೋರಾ ಬಳಿ ಕ್ರೂಸರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಎದುರಿನ ರಸ್ತೆಗೆ ನುಗ್ಗಿದೆ. ಆಗ ಆ ಕಡೆಯಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ಗಾಡಿ ಅಪ್ಪಚ್ಚಿಯಾಗಿದೆ.
ಅಪಘಾತದ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಸಿಹೋರಾ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು. ಮೃತರನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.
ಭೀಕರ ಅಪಘಾತದಲ್ಲಿ ಪ್ರಯಾಗರಾಜ್ಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಆರು ಜನ ಸಾವನ್ನಪ್ಪಿದ್ದಾರೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದ್ದಾರೆ.
ಮೃತರು ಗೋಕಾಕ್ ನಗರದ ಲಕ್ಷ್ಮೀ ಬಡಾವಣೆಯ ಬಾಲಚಂದ್ರ ನಾರಾಯಣ ಗೌಡರ(50), ಹುಕ್ಕೇರಿ ತಾಲೂಕಿನ ಹತ್ತರಗಿ ಪೋಸ್ಟ್ ವ್ಯಾಪ್ತಿಯ ಆನಂದಪುರದ ಸುನೀಲ್ ಬಾಲಕೃಷ್ಣ ಶೇಡಶ್ಯಾಳೆ(45), ಗೋಕಾಕ್ ಗೊಂಬಿಗುಡಿ ನಿವಾಸಿ ಬಸವರಾಜ್ ನಿರಪಾದಪ್ಪ ಕುರ್ತಿ(63), ಗೋಕಾಕ್ ಗುರುವಾರ ಪೇಟೆಯ ಬಸವರಾಜ್ ಶಿವಪ್ಪ ದೊಡಮನಿ(49), ಗುಳೇದಗುಡ್ಡ ತಾಲೂಕಿನ ಕಮತಗಿಯ ಈರಣ್ಣ ಶಂಕರಪ್ಪ ಶೇಬಿನಕಟ್ಟಿ(27), ಗೋಕಾಕ್ ಗುರುವಾರ ಪೇಟೆಯ ವಿರೂಪಾಕ್ಷ ಚನ್ನಪ್ಪ ಗುಮತಿ(61) ಮೃತ ದುರ್ದೈವಿಗಳು. ಮುಸ್ತಾಕ ಶಿಂಧಿಕುರಬೇಟ್, ಸದಾಶಿವ ಉಪಲಾಳಿ ಗಾಯಗೊಂಡವರು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
KA 49M 5054 ಸಂಖ್ಯೆಯ ಕ್ರೂಸರ್ ವಾಹನದಲ್ಲಿ ಒಟ್ಟು 8 ಜನ ಪ್ರಯಾಣ ಬೆಳೆಸಿದ್ದರು. ಅವರಲ್ಲಿ ಆರು ಜನ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಜಬಲ್ಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತೀಚೆಗೆ ನಡೆದ ಅಪಘಾತದಲ್ಲೂ ಬೆಳಗಾವಿ ಜಿಲ್ಲೆಯವರೇ ಮೃತರಾಗಿದ್ರು !
ಫೆ. 7 ರಂದು ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ನಾಲ್ವರು ಸೇರಿದಂತೆ ಆರು ಜನ ಸಾವನ್ನಪ್ಪಿದ್ದರು ಮತ್ತು 16 ಜನ ಗಾಯಗೊಂಡಿದ್ದರು.
As many as six Maha Kumbh pilgrims from Gokak in Belagavi district are feared dead in a road accident in Madhya Pradesh.The deceased have been identified as Balachandra Narayan Goudar (50), Basavaraj Shivappa Dodamani (49) and Virupax Channappa Gumati (61) of Gokak, Sunil Balakrishna Shedashale (45) of Hattaraki village, Basavaraj Nirupadappa Kurali (63) of Gomlegudi village, Iranna Sharanappa Shibaratti (27) of Kamatagi village.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm