ಬ್ರೇಕಿಂಗ್ ನ್ಯೂಸ್
26-02-25 06:14 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.26 : ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಹೊಡೆತ ಜೋರಾಗಿರುವಂತೆಯೇ ಹವಾಮಾನ ಇಲಾಖೆ ಅಲರ್ಟ್ ಸೂಚನೆ ನೀಡಿದ್ದು ಮುಂದಿನ ಮೂರು ದಿನಗಳಲ್ಲಿ ಬಿಸಿಲಿನ ವಾತಾವರಣ ಹೆಚ್ಚಿರಲಿದ್ದು, ಜನರು ಮಧ್ಯಾಹ್ನ ಸಮಯದಲ್ಲಿ ಹೆಚ್ಚು ಓಡಾಡದಂತೆ ಎಚ್ಚರಿಕೆ ನೀಡಿದೆ.
ಕರಾವಳಿಯಲ್ಲಿ ಉರಿ ಬಿಸಿಲು ಜೊತೆಗೆ ಭಾರೀ ಸೆಕೆಯ ಅನುಭವ ಆಗುತ್ತಿದೆ. ಬಿಸಿ ಅಲೆಯ ಪರಿಸ್ಥಿತಿಗಳು ಹೆಚ್ಚಲಿದ್ದು ಗರಿಷ್ಠ ಉಷ್ಣತೆ 35-38 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದ್ದು ಇದರ ತಾಪಮಾನ 40-50 ಡಿಗ್ರಿಯಷ್ಟು ಅನುಭವಕ್ಕೆ ಬರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಈ ಅಲರ್ಟ್ ನೀಡಲಾಗಿದೆ.

ಹೊರ ಹೋಗದಂತೆ ಮುನ್ಸೂಚನೆ
37-39 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದ್ದು, ಮಧ್ಯಾಹ್ನ 12 ರಿಂದ 3ರ ವರೆಗೆ ಹೆಚ್ಚು ಸಮಯ ಬಿಸಿಲಿಗೆ ಒಡ್ಡಿಕೊಂಡರೆ ಹೀಟ್ ಸ್ಟ್ರೋಕ್ಗೆ ಕಾರಣವಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಶಿಶುಗಳು, ವೃದ್ಧರು, ಹೊರಗೆ ಕೆಲಸ ಮಾಡುವವರು ಮತ್ತು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೆಚ್ಚು ಪರಿಣಾಮ ಬೀರಲಿದೆ. ಇದರಿಂದ ಅತಿಯಾಗಿ ಬೆವರುವುದು, ನಿರ್ಜಲೀಕರಣ, ಆಯಾಸ ಮತ್ತು ಶಾಖಕ್ಕೆ ಸಂಬಂಧಿಸಿದ ಕಾಯಿಲೆಗಳ ಅಪಾಯ ಹೆಚ್ಚುವ ಸಾಧ್ಯತೆಯಿದೆ.
ಎಪ್ರಿಲ್, ಮೇ ತಿಂಗಳಲ್ಲಿ ಮತ್ತಷ್ಟು ಏರಿಕೆ
ಹವಾಮಾನ ಇಲಾಖೆ ಹಿರಿಯ ವಿಜ್ಞಾನಿ ಎನ್. ಪುವಿಯರಸನ್ ಪ್ರಕಾರ, ಕರ್ನಾಟಕದ ಮೇಲೆ ಇರುವ ಪೂರ್ವ ಮಾರುತಗಳು ಕರಾವಳಿಯಲ್ಲಿ ಹೆಚ್ಚುತ್ತಿರುವ ತಾಪಮಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. "ಈ ಮಾರುತಗಳು ಭೂಮಿಯಿಂದ ಕರಾವಳಿಗೆ ಚಲಿಸುತ್ತವೆ, ಅವು ಕೆಲವೊಮ್ಮೆ ಅರೇಬಿಯನ್ ಸಮುದ್ರದಿಂದ ತೇವಾಂಶವನ್ನು ಸೆಳೆಯುತ್ತವೆ. ಇದರಿಂದ ಕರಾವಳಿಯಲ್ಲಿ ಆರ್ದ್ರತೆಯ ಮಟ್ಟ ಹೆಚ್ಚಾಗುತ್ತದೆ. ಹಗಲಿನ ಸಮಯದಲ್ಲಿ ಭೂಮಿ ಭಾರೀ ಬಿಸಿಯಾಗುತ್ತದೆ, ಮತ್ತು ಈ ಬೆಚ್ಚಗಿನ ಗಾಳಿಯು ಕರಾವಳಿಯ ಕಡೆಗೆ ಚಲಿಸುತ್ತದೆ, ಇದು ತಾಪಮಾನವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ವಿಜ್ಞಾನಿ ಹೇಳಿದ್ದಾರೆ.
The Indian Meteorological Department (IMD) has issued a heatwave/yellow alert for the coastal regions of Karnataka, warning of a significant rise in temperatures. The alert predicts hot and humid conditions in Udupi, Dakshina Kannada, and Uttara Kannada districts on February 26 and 27, with maximum temperatures expected to rise further.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm