ಬ್ರೇಕಿಂಗ್ ನ್ಯೂಸ್
26-02-25 06:14 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.26 : ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಹೊಡೆತ ಜೋರಾಗಿರುವಂತೆಯೇ ಹವಾಮಾನ ಇಲಾಖೆ ಅಲರ್ಟ್ ಸೂಚನೆ ನೀಡಿದ್ದು ಮುಂದಿನ ಮೂರು ದಿನಗಳಲ್ಲಿ ಬಿಸಿಲಿನ ವಾತಾವರಣ ಹೆಚ್ಚಿರಲಿದ್ದು, ಜನರು ಮಧ್ಯಾಹ್ನ ಸಮಯದಲ್ಲಿ ಹೆಚ್ಚು ಓಡಾಡದಂತೆ ಎಚ್ಚರಿಕೆ ನೀಡಿದೆ.
ಕರಾವಳಿಯಲ್ಲಿ ಉರಿ ಬಿಸಿಲು ಜೊತೆಗೆ ಭಾರೀ ಸೆಕೆಯ ಅನುಭವ ಆಗುತ್ತಿದೆ. ಬಿಸಿ ಅಲೆಯ ಪರಿಸ್ಥಿತಿಗಳು ಹೆಚ್ಚಲಿದ್ದು ಗರಿಷ್ಠ ಉಷ್ಣತೆ 35-38 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದ್ದು ಇದರ ತಾಪಮಾನ 40-50 ಡಿಗ್ರಿಯಷ್ಟು ಅನುಭವಕ್ಕೆ ಬರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಈ ಅಲರ್ಟ್ ನೀಡಲಾಗಿದೆ.

ಹೊರ ಹೋಗದಂತೆ ಮುನ್ಸೂಚನೆ
37-39 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದ್ದು, ಮಧ್ಯಾಹ್ನ 12 ರಿಂದ 3ರ ವರೆಗೆ ಹೆಚ್ಚು ಸಮಯ ಬಿಸಿಲಿಗೆ ಒಡ್ಡಿಕೊಂಡರೆ ಹೀಟ್ ಸ್ಟ್ರೋಕ್ಗೆ ಕಾರಣವಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಶಿಶುಗಳು, ವೃದ್ಧರು, ಹೊರಗೆ ಕೆಲಸ ಮಾಡುವವರು ಮತ್ತು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೆಚ್ಚು ಪರಿಣಾಮ ಬೀರಲಿದೆ. ಇದರಿಂದ ಅತಿಯಾಗಿ ಬೆವರುವುದು, ನಿರ್ಜಲೀಕರಣ, ಆಯಾಸ ಮತ್ತು ಶಾಖಕ್ಕೆ ಸಂಬಂಧಿಸಿದ ಕಾಯಿಲೆಗಳ ಅಪಾಯ ಹೆಚ್ಚುವ ಸಾಧ್ಯತೆಯಿದೆ.
ಎಪ್ರಿಲ್, ಮೇ ತಿಂಗಳಲ್ಲಿ ಮತ್ತಷ್ಟು ಏರಿಕೆ
ಹವಾಮಾನ ಇಲಾಖೆ ಹಿರಿಯ ವಿಜ್ಞಾನಿ ಎನ್. ಪುವಿಯರಸನ್ ಪ್ರಕಾರ, ಕರ್ನಾಟಕದ ಮೇಲೆ ಇರುವ ಪೂರ್ವ ಮಾರುತಗಳು ಕರಾವಳಿಯಲ್ಲಿ ಹೆಚ್ಚುತ್ತಿರುವ ತಾಪಮಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. "ಈ ಮಾರುತಗಳು ಭೂಮಿಯಿಂದ ಕರಾವಳಿಗೆ ಚಲಿಸುತ್ತವೆ, ಅವು ಕೆಲವೊಮ್ಮೆ ಅರೇಬಿಯನ್ ಸಮುದ್ರದಿಂದ ತೇವಾಂಶವನ್ನು ಸೆಳೆಯುತ್ತವೆ. ಇದರಿಂದ ಕರಾವಳಿಯಲ್ಲಿ ಆರ್ದ್ರತೆಯ ಮಟ್ಟ ಹೆಚ್ಚಾಗುತ್ತದೆ. ಹಗಲಿನ ಸಮಯದಲ್ಲಿ ಭೂಮಿ ಭಾರೀ ಬಿಸಿಯಾಗುತ್ತದೆ, ಮತ್ತು ಈ ಬೆಚ್ಚಗಿನ ಗಾಳಿಯು ಕರಾವಳಿಯ ಕಡೆಗೆ ಚಲಿಸುತ್ತದೆ, ಇದು ತಾಪಮಾನವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ವಿಜ್ಞಾನಿ ಹೇಳಿದ್ದಾರೆ.
The Indian Meteorological Department (IMD) has issued a heatwave/yellow alert for the coastal regions of Karnataka, warning of a significant rise in temperatures. The alert predicts hot and humid conditions in Udupi, Dakshina Kannada, and Uttara Kannada districts on February 26 and 27, with maximum temperatures expected to rise further.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm