ಬ್ರೇಕಿಂಗ್ ನ್ಯೂಸ್
27-02-25 03:28 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.27 : ಡಿಕೆ ಶಿವಕುಮಾರ್ ನಿಮ್ಮ ಪಕ್ಷದ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ ಎಂದು ಬೆಳಗಾವಿ ಸಂಸದ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಅವರು ಕುಂಭಮೇಳಕ್ಕೆ ಹೋಗಿರೋದು, ಕೊಯಮತ್ತೂರಿಗೆ ಹೋಗಿರೋದು ಸಹಜ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. ಇದು ನಿಮ್ಮ ಪಕ್ಷಕ್ಕೆ ಸರಿ ಆಗಲ್ಲ ಅಂದ್ರೆ, ಡಿಕೆ ಶಿವಕುಮಾರ್ ಸಸ್ಪೆಂಡ್ ಮಾಡಿ. ಅವರು ನಿಮ್ಮ ಪಕ್ಷದ ತತ್ವ ಸಿದ್ದಾಂತಕ್ಕೆ ವಿರೋಧವಾಗಿದ್ರೆ ಅವರನ್ನು ಪಾರ್ಟಿಯಿಂದ ಹೊರಗೆ ಹಾಕಿ.

ಕಾಂಗ್ರೆಸ್ ಗೆ ಹಿಂದೂಗಳ ಬಗ್ಗೆ ದ್ವೇಷ ಇದೆ. ಇದರಿಂದ ಕಾಂಗ್ರೆಸ್ ಉದ್ದಾರ ಆಗಲ್ಲ. ಹಿಂದೂಗಳು ಇಲ್ಲದೆ ನೀವು ರಾಜಕಾರಣ ಮಾಡ್ತೀನಿ ಅಂದರೆ ಅದು ನಿಮ್ಮ ಹಣೆಬರಹ. ಹಿಂದೂಗಳನ್ನ ಕೀಳಾಗಿ ಕಾಣೋದೆ, ಅವರ ಅವನತಿಗೆ ಕಾರಣ. ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಿಂದೂ ವಿರೋಧಿಯಾಗಿವೆ. ಈ ದೇಶ ಹಿಂದೂಗಳ ದೇಶ, ಹಿಂದೂ ರಾಷ್ಟ್ರ ಅನ್ನೋ ಪರಂಪರೆ ಇದೆ. ಇದಕ್ಕೆ ಎಲ್ಲೂ ಅಡ್ಡಿಯಾಗಬಾರದು ಎಂದರು.
ಕಮ್ಯುನಿಸ್ಟರು ಕೂಡ ಹಿಂದೂ ದೇವಾಲಯಕ್ಕೆ ಹೋಗಿದ್ದಾರೆ. ಅವರು ಕೂಡಾ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ. ಕಾಂಗ್ರೆಸ್ ನವರು ಎಷ್ಟು ಜನ ಕುಂಭಮೇಳಕ್ಕೆ ಹೋಗಿದ್ದಾರೆ. ರಾಜಕಾರಣವನ್ನು ಧರ್ಮಕ್ಕೆ ಥಳಕು ಹಾಕಬಾರದು ಎಂದು ಶೆಟ್ಟರ್ ಹೇಳಿದರು.
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಗೈದ ಪ್ರಕರಣ ಸಂಬಂಧಿಸಿ, ನಾನು ಬೆಳಗಾವಿ ಸಂಸದನಾಗಿ ಕೆಲಸ ಮಾಡತಿದೀನಿ. ಅಲ್ಲಿನ ಜನ ಎಲ್ಲರೂ ನಂಗೆ ಸಪೋರ್ಟ್ ಮಾಡಿದಾರೆ. ಹಿಂದೆ ಮರಾಠರು ಮತ್ತು ಕನ್ನಡಿಗರ ನಡುವೆ ಗ್ಯಾಪ್ ಇತ್ತು. ಎಲ್ಲರೂ ಅಣ್ಣ ತಮ್ಮಂದಿರ ತರಹ ಕೆಲಸ ಮಾಡತಿದಾರೆ. ಸಂಘರ್ಷ ಮಾಡಲಿಕ್ಕೆ ಹೋಗಬಾರದು. ಆ ಘಟನೆ ಆಗಬಾರದಿತ್ತು. ಹಲ್ಲೆ ಮಾಡಿದವರ ವಿರುದ್ದ ಕ್ರಮ ಆಗಬೇಕು. ಪೋಕ್ಸೊ ಕೇಸ್ ಹಾಕಿದ್ದು ಕೂಡ ತಪ್ಪು. ಪೋಕ್ಸೋ ಕೇಸ್ ಹಾಕಿರೋ ಕಾರಣಕ್ಕೆ ಅದು ಹೆಚ್ಚಿನ ಮಹತ್ವ ಬಂತು ಎಂದರು. ನಾವೆಲ್ಲರೂ ಭಾರತದಲ್ಲಿದ್ದೇವೆ. ಪಾಕಿಸ್ತಾನ ಇಂಡಿಯಾ ಅಲ್ಲ. ಸಹೋದರರ ರೀತಿಯಲ್ಲಿ ನಾವು ಬಾಳುತಿದೀವಿ. ಅದು ಡಿಸ್ಟರ್ಬ್ ಆಗಬಾರದು ಎಂದು ಶೆಟ್ಟರ್ ಹೇಳಿದರು.
Belgaum MP and former CM Jagadish Shettar said that if DK Shivakumar is against your party's principles, then suspend him.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm